ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್ ಎಸ್ ಜಲಾಶಯದ ಒಳ ಹರಿವಿನ ಮಟ್ಟ ಏರಿಕೆಯಾಗಿದ್ದು, ಜಲಾಶಯ ತುಂಬಿ ತುಳುಕುತ್ತಿದೆ.
ಮಳೆ ಆರಂಭಕ್ಕೂ ಮೊದಲು ನೀರು ಇಲ್ಲದೆ ಖಾಲಿ ಖಾಲಿಯಾಗಿದ್ದ ಜಲಾಶಯ ಈಗ ಭರ್ಜರಿ ಮಳೆಯಿಂದ ತುಂಬಿದೆ. ಇದರಿಂದಾಗಿ ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಅದರಲ್ಲೂ ವೇಣುಗೋಪಾಲಸ್ವಾಮಿ ದೇವಸ್ಥಾನದ ಹಿಂದೆ ಇರುವ ಹಿನ್ನೀರಿನಲ್ಲಿ ಈಗ ಪ್ರವಾಸಗರ ದಂಡೆ ಹರಿದುಬರುತ್ತಿದೆ.
ಜಲಾಶಯದ ತುಂಬಿ ತುಳುಕುತ್ತಿರುವುದರಿಂದ ಹಿನ್ನೀರು ಸಮುದ್ರದಂತೆ ಅಲೆಗಳು ಏಳುತ್ತಿದ್ದು ಜನರಿಗೆ ಒಂದು ಕಡಲ ಕಿನಾರೆ ರೀತಿ ಅನುಭವವನ್ನು ಕೊಡುತ್ತಿದೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕೂಡ ಈ ಕೆ.ಆರ್ ಎಸ್ ಬ್ಯಾಕ್ ವಾಟರ್ ಗೆ ಬಂದು ನೀರಿನ ಬಳಿ ಆಟ ಆಡಿ, ಮೋಜು ಮಾಡಿಕೊಂಡು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರೆ. ಇನ್ನ ಕೆಲವರು ತಮ್ಮ ಒತ್ತಡದ ಬದುಕು, ಸಾಕಷ್ಟು ಜವಾಬ್ದಾರಿಗಳ ನಡುವೆ ಈ ಬ್ಯಾಕ್ ವಾಟರ್ ಗೆ ಬಂದು ತಮ್ಮ ಕಷ್ಟ ಸುಖ, ನೋವು ನಲಿವು ಎಲ್ಲವನ್ನು ಮರೆತು ಸಮುದ್ರ ಅಲೆಗಳಂತೆ ಅಪ್ಪಳಿಸುತ್ತಿರುವ ಹಿನ್ನೀರನ್ನ ನೋಡಿ ರಿಲ್ಯಾಕ್ಸ್ ಮಾಡುತ್ತಿದ್ದಾರೆ.
ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿಯ…
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…
ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…
ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…