ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್ ಎಸ್ ಜಲಾಶಯದ ಒಳ ಹರಿವಿನ ಮಟ್ಟ ಏರಿಕೆಯಾಗಿದ್ದು, ಜಲಾಶಯ ತುಂಬಿ ತುಳುಕುತ್ತಿದೆ.
ಮಳೆ ಆರಂಭಕ್ಕೂ ಮೊದಲು ನೀರು ಇಲ್ಲದೆ ಖಾಲಿ ಖಾಲಿಯಾಗಿದ್ದ ಜಲಾಶಯ ಈಗ ಭರ್ಜರಿ ಮಳೆಯಿಂದ ತುಂಬಿದೆ. ಇದರಿಂದಾಗಿ ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಅದರಲ್ಲೂ ವೇಣುಗೋಪಾಲಸ್ವಾಮಿ ದೇವಸ್ಥಾನದ ಹಿಂದೆ ಇರುವ ಹಿನ್ನೀರಿನಲ್ಲಿ ಈಗ ಪ್ರವಾಸಗರ ದಂಡೆ ಹರಿದುಬರುತ್ತಿದೆ.
ಜಲಾಶಯದ ತುಂಬಿ ತುಳುಕುತ್ತಿರುವುದರಿಂದ ಹಿನ್ನೀರು ಸಮುದ್ರದಂತೆ ಅಲೆಗಳು ಏಳುತ್ತಿದ್ದು ಜನರಿಗೆ ಒಂದು ಕಡಲ ಕಿನಾರೆ ರೀತಿ ಅನುಭವವನ್ನು ಕೊಡುತ್ತಿದೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕೂಡ ಈ ಕೆ.ಆರ್ ಎಸ್ ಬ್ಯಾಕ್ ವಾಟರ್ ಗೆ ಬಂದು ನೀರಿನ ಬಳಿ ಆಟ ಆಡಿ, ಮೋಜು ಮಾಡಿಕೊಂಡು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರೆ. ಇನ್ನ ಕೆಲವರು ತಮ್ಮ ಒತ್ತಡದ ಬದುಕು, ಸಾಕಷ್ಟು ಜವಾಬ್ದಾರಿಗಳ ನಡುವೆ ಈ ಬ್ಯಾಕ್ ವಾಟರ್ ಗೆ ಬಂದು ತಮ್ಮ ಕಷ್ಟ ಸುಖ, ನೋವು ನಲಿವು ಎಲ್ಲವನ್ನು ಮರೆತು ಸಮುದ್ರ ಅಲೆಗಳಂತೆ ಅಪ್ಪಳಿಸುತ್ತಿರುವ ಹಿನ್ನೀರನ್ನ ನೋಡಿ ರಿಲ್ಯಾಕ್ಸ್ ಮಾಡುತ್ತಿದ್ದಾರೆ.
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…