ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್ ಎಸ್ ಜಲಾಶಯದ ಒಳ ಹರಿವಿನ ಮಟ್ಟ ಏರಿಕೆಯಾಗಿದ್ದು, ಜಲಾಶಯ ತುಂಬಿ ತುಳುಕುತ್ತಿದೆ.
ಮಳೆ ಆರಂಭಕ್ಕೂ ಮೊದಲು ನೀರು ಇಲ್ಲದೆ ಖಾಲಿ ಖಾಲಿಯಾಗಿದ್ದ ಜಲಾಶಯ ಈಗ ಭರ್ಜರಿ ಮಳೆಯಿಂದ ತುಂಬಿದೆ. ಇದರಿಂದಾಗಿ ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಅದರಲ್ಲೂ ವೇಣುಗೋಪಾಲಸ್ವಾಮಿ ದೇವಸ್ಥಾನದ ಹಿಂದೆ ಇರುವ ಹಿನ್ನೀರಿನಲ್ಲಿ ಈಗ ಪ್ರವಾಸಗರ ದಂಡೆ ಹರಿದುಬರುತ್ತಿದೆ.
ಜಲಾಶಯದ ತುಂಬಿ ತುಳುಕುತ್ತಿರುವುದರಿಂದ ಹಿನ್ನೀರು ಸಮುದ್ರದಂತೆ ಅಲೆಗಳು ಏಳುತ್ತಿದ್ದು ಜನರಿಗೆ ಒಂದು ಕಡಲ ಕಿನಾರೆ ರೀತಿ ಅನುಭವವನ್ನು ಕೊಡುತ್ತಿದೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕೂಡ ಈ ಕೆ.ಆರ್ ಎಸ್ ಬ್ಯಾಕ್ ವಾಟರ್ ಗೆ ಬಂದು ನೀರಿನ ಬಳಿ ಆಟ ಆಡಿ, ಮೋಜು ಮಾಡಿಕೊಂಡು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರೆ. ಇನ್ನ ಕೆಲವರು ತಮ್ಮ ಒತ್ತಡದ ಬದುಕು, ಸಾಕಷ್ಟು ಜವಾಬ್ದಾರಿಗಳ ನಡುವೆ ಈ ಬ್ಯಾಕ್ ವಾಟರ್ ಗೆ ಬಂದು ತಮ್ಮ ಕಷ್ಟ ಸುಖ, ನೋವು ನಲಿವು ಎಲ್ಲವನ್ನು ಮರೆತು ಸಮುದ್ರ ಅಲೆಗಳಂತೆ ಅಪ್ಪಳಿಸುತ್ತಿರುವ ಹಿನ್ನೀರನ್ನ ನೋಡಿ ರಿಲ್ಯಾಕ್ಸ್ ಮಾಡುತ್ತಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…