ಮೈಸೂರು ನಗರ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಐಪಿಎಲ್‌ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ ಜೊತೆ ಮಾತುಕತೆ ನಡೆಸಿದ್ದೇನೆ. ಬಿಸಿಸಿಐ ಸಹ ಬೆಂಗಳೂರಿನಲ್ಲಿ ಈ ಬಾರಿಯ ಉದ್ಘಾಟನೆ ಪಂದ್ಯ ನಡೆಸಲು ಮಾತುಕತೆ ನಡೆಸುತ್ತಿದೆ. ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ಹೋಂ ಗ್ರೌಂಡ್ ನಲ್ಲೇ ಉದ್ಘಾಟನೆ ಪಂದ್ಯ ನಡೆಯುತ್ತಿತ್ತು. ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಘಟನೆಯಿಂದ ಸಾಕಷ್ಟು ಗೊಂದಲಗಳಾಗಿತ್ತು. ಹೀಗಾಗಿ ನಮ್ಮ ತಂಡ ಚುನಾವಣೆ ಗೆದ್ದ ಬಳಿಕ ಈಗಾಗಲೇ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಗೃಹ ಸಚಿವರ ಜೊತೆ ಫೋನ್ ಮೂಲಕ ಮಾತನಾಡಿದ್ದೇನೆ. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯದ ದಿನಾಂಕ ನಿಗದಿಯಾಗಲಿದೆ. ಬೆಂಗಳೂರಿನಲ್ಲಿ ಐಪಿಎಲ್, ಅಂತರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳು ನಡೆಯುತ್ತದೆ ಎಂದು ಮಾಹಿತಿ ನೀಡಿದರು.

ಇನ್ನು ವಿಜಯ್ ಹಜಾರೆ ಪಂದ್ಯಕ್ಕೆ ವಿರಾಟ್ ಕೊಹ್ಲಿ ಬೆಂಗಳೂರಿಗೆ ಬರಲಿದ್ದಾರೆ. ಚಿನ್ನಸ್ವಾಮಿ ಸೇರಿದಂತೆ ಮೂರು ಕ್ರೀಡಾಂಗಣ ಬೆಂಗಳೂರಿನಲ್ಲಿದೆ. ಡೆಲ್ಲಿ ತಂಡದಿಂದ ಈ ಬಾರಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಪಂದ್ಯ ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಮೈಸೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಎಲ್ಲಾ ಮಾತುಕತೆಗಳು ನಡೆಯುತ್ತಿದೆ.
ಕಳೆದ ಮೂರು ವರ್ಷಗಳಿಂದ ಕ್ಲಬ್‌ನಲ್ಲಿ ಸಾಕಷ್ಟು ಗೊಂದಗಳಾಗಿತ್ತು. ಎಲ್ಲಾ ಗೊಂದಲಗಳನ್ನು ನಮ್ಮ ತಂಡ ಬಗೆಹರಿಸಿ ಉತ್ತಮ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

4 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

4 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

4 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

4 hours ago