ಮೈಸೂರು: ನಗರದ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರ(ಜು.17) ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಂಡು, ಕೆರೆ ಏರಿ ಮೇಲೆ ಬಿದಿದ್ದ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಕವರ್ ಸೇರಿದಂತೆ ವಿವಿಧ ತ್ಯಾಜ್ಯ ಸಂಗ್ರಹ ಮಾಡಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಪ್ರಸಿದ್ಧ ಕುಕ್ಕರಹಳ್ಳಿ ಕೆರೆಯಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದ್ದು, ಮೈಸೂರಿನ ಹಲವಾರು ಸಂಘ ಸಂಸ್ಥೆಗಳೊಂದಿಗೆ ಸ್ವಚ್ಛತಾ ಕಾರ್ಯವನ್ನು ಮುಂದುವರಿಸುತ್ತಾ ಬಂದಿದ್ದೇವೆ. ಮೈಸೂರಿನ ಕೆರೆಗಳು, ಸ್ಮಾರಕಗಳು ಪ್ರಸಿದ್ಧ ಸ್ಥಳಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಹಾಗಾಗಿ ಸ್ವಚ್ಚತಾ ಅಭಿಯಾನ ಹಮ್ಮೊಕೊಂಡಿದ್ದೇವೆ. ಇದು ಹೀಗೆ ಮುಂದುವರೆಯಲಿದೆ ಎಂದು ಹೇಳಿದರು.
ನಾನು ಮೈಸೂರಿನಲ್ಲಿ ಇರುವ ವೇಳೆ ಸ್ವಚ್ಛತಾ ಕಾರ್ಯವನ್ನು ಕೈಗೊಂಡು, ಮುಂದುವರೆಸಿಕೊಂಡು ಹೋಗುತ್ತೇನೆ. ಈ ಸ್ವಚ್ಚತಾ ಅಭಿಯಾನಕ್ಕೆ ಇಂದು ಚಾಲನೆ ನಿಡಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಿಮ್ಮ ಸಹಕಾರ ಹೀಗೆ ಇರಲಿ ಎಂದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…