ಮೈಸೂರು ನಗರ

ಕಾಂಗ್ರೆಸ್‌ಗೆ ನನ್ನನ್ನು ಕಂಡರೆ ಭಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ

ಮೈಸೂರು: ನನ್ನೊಬ್ಬನ ಮೇಲೆ ಕಾಂಗ್ರೆಸ್‌ಗೆ ಅತಿಯಾದ ಭಯವಿದ್ದು, ಪದೇ ಪದೇ ಕಾಂಗ್ರೆಸ್‌ ಮುಖಂಡರು ನನ್ನ ಹೆಸರು ಜಪಿಸುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆ ಅತಿಯಾದ ಭಯ ಇದೆ. ಹೀಗಾಗಿ ಪದೇ ಪದೇ ಕಾಂಗ್ರೆಸ್ ಮುಖಂಡರು ನನ್ನ ಹೆಸರನ್ನು ಜಪಿಸುತ್ತಾರೆ. ಬಿಜೆಪಿ-ಜೆಡಿಎಸ್ ಜೊತೆಯಾದ ಮೇಲಂತು ಕಾಂಗ್ರೆಸ್‌ಗೆ ನಿದ್ದೆ ಬರುತ್ತಿಲ್ಲ. ಅದಕ್ಕೋಸ್ಕರ ನನ್ನ ಮೇಲೆ ಪದೇ ಪದೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಲೇವಡಿ ಮಾಡಿದರು.

ಇನ್ನು ಮುಂದಿನದು ನಮ್ಮದೇ ಸರ್ಕಾರ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಂದಿನದ್ದಲ್ಲ ಇನ್ನು ಇಪ್ಪತ್ತು ವರ್ಷವೂ ನಿಮ್ಮದೇ ಇರಲಿ. ಮೊದಲು ಹೇಳಿದ ಕೆಲಸ ಮಾಡಿ. ಇಪ್ಪತ್ತು ವರ್ಷ ನಮ್ಮದೇ ಸರ್ಕಾರ ಎಂದವರು ಏನೇನಾದ್ರು ಎಂಬುದು ನಮಗೆಲ್ಲಾ ಗೊತ್ತಿದೆ. ಯಾರದ್ದು ಸರ್ಕಾರ ಎಂಬುದನ್ನು ಜನ ತೀರ್ಮಾನ ಮಾಡ್ತಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಖುರ್ಚಿಗಾಗಿ ಗಲಾಟೆಗಳೇ ನಡೆಯುತ್ತಿದೆ. ಗಲಾಟೆಯಲ್ಲಿ ಮುಳುಗಿರುವ ಕಾಂಗ್ರೆಸನ್ನು ಜನ ಹೇಗೆ ಒಪ್ಪುತ್ತಾರೆ. ಜನ ಎಲ್ಲದನ್ನು ಗಮನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ವಿಚಾರ ಇರಲಿ. ಮೊದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಏನು ಮಾಡಿದ್ದೀರಾ ಅದನ್ನು ಮೊದಲು ಹೇಳಿ. ಆರ್‌ಎಸ್‌ಎಸ್‌ ಬಂದ್ ಮಾಡುವುದಿರಲಿ. ಈಗ ಕಾಂಗ್ರೆಸ್ಸೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್‌ನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನು ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

8 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

9 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

9 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

9 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

9 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

9 hours ago