kumaraswamy statement
ಮೈಸೂರು: ನನ್ನೊಬ್ಬನ ಮೇಲೆ ಕಾಂಗ್ರೆಸ್ಗೆ ಅತಿಯಾದ ಭಯವಿದ್ದು, ಪದೇ ಪದೇ ಕಾಂಗ್ರೆಸ್ ಮುಖಂಡರು ನನ್ನ ಹೆಸರು ಜಪಿಸುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆ ಅತಿಯಾದ ಭಯ ಇದೆ. ಹೀಗಾಗಿ ಪದೇ ಪದೇ ಕಾಂಗ್ರೆಸ್ ಮುಖಂಡರು ನನ್ನ ಹೆಸರನ್ನು ಜಪಿಸುತ್ತಾರೆ. ಬಿಜೆಪಿ-ಜೆಡಿಎಸ್ ಜೊತೆಯಾದ ಮೇಲಂತು ಕಾಂಗ್ರೆಸ್ಗೆ ನಿದ್ದೆ ಬರುತ್ತಿಲ್ಲ. ಅದಕ್ಕೋಸ್ಕರ ನನ್ನ ಮೇಲೆ ಪದೇ ಪದೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಲೇವಡಿ ಮಾಡಿದರು.
ಇನ್ನು ಮುಂದಿನದು ನಮ್ಮದೇ ಸರ್ಕಾರ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಂದಿನದ್ದಲ್ಲ ಇನ್ನು ಇಪ್ಪತ್ತು ವರ್ಷವೂ ನಿಮ್ಮದೇ ಇರಲಿ. ಮೊದಲು ಹೇಳಿದ ಕೆಲಸ ಮಾಡಿ. ಇಪ್ಪತ್ತು ವರ್ಷ ನಮ್ಮದೇ ಸರ್ಕಾರ ಎಂದವರು ಏನೇನಾದ್ರು ಎಂಬುದು ನಮಗೆಲ್ಲಾ ಗೊತ್ತಿದೆ. ಯಾರದ್ದು ಸರ್ಕಾರ ಎಂಬುದನ್ನು ಜನ ತೀರ್ಮಾನ ಮಾಡ್ತಾರೆ. ಕಾಂಗ್ರೆಸ್ನಲ್ಲಿ ಸಿಎಂ ಖುರ್ಚಿಗಾಗಿ ಗಲಾಟೆಗಳೇ ನಡೆಯುತ್ತಿದೆ. ಗಲಾಟೆಯಲ್ಲಿ ಮುಳುಗಿರುವ ಕಾಂಗ್ರೆಸನ್ನು ಜನ ಹೇಗೆ ಒಪ್ಪುತ್ತಾರೆ. ಜನ ಎಲ್ಲದನ್ನು ಗಮನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಆರ್ಎಸ್ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆರ್ಎಸ್ಎಸ್ ವಿಚಾರ ಇರಲಿ. ಮೊದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಏನು ಮಾಡಿದ್ದೀರಾ ಅದನ್ನು ಮೊದಲು ಹೇಳಿ. ಆರ್ಎಸ್ಎಸ್ ಬಂದ್ ಮಾಡುವುದಿರಲಿ. ಈಗ ಕಾಂಗ್ರೆಸ್ಸೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್ನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನು ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದರು.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…