ಮೈಸೂರು ನಗರ

ಕಾಂಗ್ರೆಸ್‌ಗೆ ನನ್ನನ್ನು ಕಂಡರೆ ಭಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ

ಮೈಸೂರು: ನನ್ನೊಬ್ಬನ ಮೇಲೆ ಕಾಂಗ್ರೆಸ್‌ಗೆ ಅತಿಯಾದ ಭಯವಿದ್ದು, ಪದೇ ಪದೇ ಕಾಂಗ್ರೆಸ್‌ ಮುಖಂಡರು ನನ್ನ ಹೆಸರು ಜಪಿಸುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆ ಅತಿಯಾದ ಭಯ ಇದೆ. ಹೀಗಾಗಿ ಪದೇ ಪದೇ ಕಾಂಗ್ರೆಸ್ ಮುಖಂಡರು ನನ್ನ ಹೆಸರನ್ನು ಜಪಿಸುತ್ತಾರೆ. ಬಿಜೆಪಿ-ಜೆಡಿಎಸ್ ಜೊತೆಯಾದ ಮೇಲಂತು ಕಾಂಗ್ರೆಸ್‌ಗೆ ನಿದ್ದೆ ಬರುತ್ತಿಲ್ಲ. ಅದಕ್ಕೋಸ್ಕರ ನನ್ನ ಮೇಲೆ ಪದೇ ಪದೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಲೇವಡಿ ಮಾಡಿದರು.

ಇನ್ನು ಮುಂದಿನದು ನಮ್ಮದೇ ಸರ್ಕಾರ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಂದಿನದ್ದಲ್ಲ ಇನ್ನು ಇಪ್ಪತ್ತು ವರ್ಷವೂ ನಿಮ್ಮದೇ ಇರಲಿ. ಮೊದಲು ಹೇಳಿದ ಕೆಲಸ ಮಾಡಿ. ಇಪ್ಪತ್ತು ವರ್ಷ ನಮ್ಮದೇ ಸರ್ಕಾರ ಎಂದವರು ಏನೇನಾದ್ರು ಎಂಬುದು ನಮಗೆಲ್ಲಾ ಗೊತ್ತಿದೆ. ಯಾರದ್ದು ಸರ್ಕಾರ ಎಂಬುದನ್ನು ಜನ ತೀರ್ಮಾನ ಮಾಡ್ತಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಖುರ್ಚಿಗಾಗಿ ಗಲಾಟೆಗಳೇ ನಡೆಯುತ್ತಿದೆ. ಗಲಾಟೆಯಲ್ಲಿ ಮುಳುಗಿರುವ ಕಾಂಗ್ರೆಸನ್ನು ಜನ ಹೇಗೆ ಒಪ್ಪುತ್ತಾರೆ. ಜನ ಎಲ್ಲದನ್ನು ಗಮನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ವಿಚಾರ ಇರಲಿ. ಮೊದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಏನು ಮಾಡಿದ್ದೀರಾ ಅದನ್ನು ಮೊದಲು ಹೇಳಿ. ಆರ್‌ಎಸ್‌ಎಸ್‌ ಬಂದ್ ಮಾಡುವುದಿರಲಿ. ಈಗ ಕಾಂಗ್ರೆಸ್ಸೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್‌ನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನು ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

2 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

2 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

3 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago