kumaraswamy statement
ಮೈಸೂರು: ನನ್ನೊಬ್ಬನ ಮೇಲೆ ಕಾಂಗ್ರೆಸ್ಗೆ ಅತಿಯಾದ ಭಯವಿದ್ದು, ಪದೇ ಪದೇ ಕಾಂಗ್ರೆಸ್ ಮುಖಂಡರು ನನ್ನ ಹೆಸರು ಜಪಿಸುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆ ಅತಿಯಾದ ಭಯ ಇದೆ. ಹೀಗಾಗಿ ಪದೇ ಪದೇ ಕಾಂಗ್ರೆಸ್ ಮುಖಂಡರು ನನ್ನ ಹೆಸರನ್ನು ಜಪಿಸುತ್ತಾರೆ. ಬಿಜೆಪಿ-ಜೆಡಿಎಸ್ ಜೊತೆಯಾದ ಮೇಲಂತು ಕಾಂಗ್ರೆಸ್ಗೆ ನಿದ್ದೆ ಬರುತ್ತಿಲ್ಲ. ಅದಕ್ಕೋಸ್ಕರ ನನ್ನ ಮೇಲೆ ಪದೇ ಪದೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಲೇವಡಿ ಮಾಡಿದರು.
ಇನ್ನು ಮುಂದಿನದು ನಮ್ಮದೇ ಸರ್ಕಾರ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಂದಿನದ್ದಲ್ಲ ಇನ್ನು ಇಪ್ಪತ್ತು ವರ್ಷವೂ ನಿಮ್ಮದೇ ಇರಲಿ. ಮೊದಲು ಹೇಳಿದ ಕೆಲಸ ಮಾಡಿ. ಇಪ್ಪತ್ತು ವರ್ಷ ನಮ್ಮದೇ ಸರ್ಕಾರ ಎಂದವರು ಏನೇನಾದ್ರು ಎಂಬುದು ನಮಗೆಲ್ಲಾ ಗೊತ್ತಿದೆ. ಯಾರದ್ದು ಸರ್ಕಾರ ಎಂಬುದನ್ನು ಜನ ತೀರ್ಮಾನ ಮಾಡ್ತಾರೆ. ಕಾಂಗ್ರೆಸ್ನಲ್ಲಿ ಸಿಎಂ ಖುರ್ಚಿಗಾಗಿ ಗಲಾಟೆಗಳೇ ನಡೆಯುತ್ತಿದೆ. ಗಲಾಟೆಯಲ್ಲಿ ಮುಳುಗಿರುವ ಕಾಂಗ್ರೆಸನ್ನು ಜನ ಹೇಗೆ ಒಪ್ಪುತ್ತಾರೆ. ಜನ ಎಲ್ಲದನ್ನು ಗಮನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಆರ್ಎಸ್ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆರ್ಎಸ್ಎಸ್ ವಿಚಾರ ಇರಲಿ. ಮೊದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಏನು ಮಾಡಿದ್ದೀರಾ ಅದನ್ನು ಮೊದಲು ಹೇಳಿ. ಆರ್ಎಸ್ಎಸ್ ಬಂದ್ ಮಾಡುವುದಿರಲಿ. ಈಗ ಕಾಂಗ್ರೆಸ್ಸೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್ನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನು ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದರು.
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…