ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು.
ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.
ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ಮಾಜಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಅವರು ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ನೂತನ ಅಧ್ಯಕ್ಷರಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶುಭ ಕೋರಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಂಬ್ರಳ್ಳಿ ಸುಬ್ಬಣ್ಣ ಅವರು, ನಾನು ಇಂದು ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಜಿಲ್ಲೆಯ ಜವಾಬ್ದಾರಿ ನನ್ನ ಮೇಲಿದೆ. ತಳ ಮಟ್ಟದಲ್ಲಿ ಪಕ್ಷವನ್ನು ಕಟ್ಟಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲು ಶ್ರಮ ವಹಿಸುತ್ತೇನೆ ಎಂದರು.
ಇನ್ನು ಮುಂದಿನ ಚುನಾವಣೆಗೆಂದೇ ಮಂಡಲ ಸಮಿತಿಯ ಜೊತೆ ಚರ್ಚಿಸಿ, ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲು ಶ್ರಮ ವಹಿಸಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ನಡೆಯುವ ಎಲ್ಲಾ ಬೆಳವಣಿಗೆಗೆಳು ಇಲ್ಲಿ ಲಭ್ಯ.. ಮನೆಯಲ್ಲೇ ಕುಳಿತು ಸಾಂಸ್ಕೃತಿಕ ನಗರ ಮಾಹಿತಿ ಪಡೆಯಿರಿ
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…