ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿ ಮುತ್ತುರಾಜ್ ಸಹ ಭಾಗಿಯಾಗಿದ್ದರು. ಸಭೆಗೆ ಬಂದಿದ್ದ ಎರಡೂ ಕೋಮಿನ ಜನತೆಯ ಬಳಿ ಅಭಿಪ್ರಾಯ ಸಂಗ್ರಹಿಸಲಾಯಿತು.
ಇನ್ನು ಇಂದಿನ ಸಭೆಗೆ ಮಸೀದಿ ಪುನರಾರಂಭ ಸಂಬಂಧ ಕೋರ್ಟ್ ಮೇಟ್ಟಿಲೇರಿದ್ದ ದೂರುದಾರ ಮುನಾವರ್ ಪಾಶಾ ಹಾಜರಾಗಿರಲಿಲ್ಲ.
ಸಭೆಯಲ್ಲಿ ಒಂದು ಕೋಮಿನ ಜನಾಂಗ ಮಸೀದಿಯನ್ನು ಮತ್ತೆ ತೆರೆಯಬೇಕು ಎಂದರೆ, ಮತ್ತೊಂದು ಕೋಮಿನ ಜನಾಂಗ ಮಸೀದಿಯನ್ನು ಯಾವುದೇ ಕಾರಣಕ್ಕೂ ಮತ್ತೆ ಓಪನ್ ಮಾಡಬಾರದು ಎಂದು ಆಗ್ರಹಿಸಿದೆ.
ಎರಡು ಕೋಮಿನ ಜನತೆಯ ಬಳಿ ಇಂದು ಅಭಿಪ್ರಾಯ ಸಂಗ್ರಹಿಸಿದ್ದು, ಇದು ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…