ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ರೀ ಓಪನ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೆಸಿಡೆನ್ಸಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮಸೀದಿಯನ್ನು ರೀಓಪನ್ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಾನೊಬ್ಬ ಬಿಜೆಪಿ ಕಾರ್ಯಕರ್ತನಾಗಿ ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿ ಹೇಳುತ್ತೇನೆ. ತಾಕತ್ತಿದ್ದರೆ ಓಪನ್ ಮಾಡಿ ನೋಡಿ. ಆ ಮಸೀದಿ ರಾಜು ಹತ್ಯೆಯಾದ ಬಳಿಕ ಬಂದಾಗಿದೆ. ಈಗ ಅದನ್ನ ಓಪನ್ ಮಾಡೋಕೆ ಅಷ್ಟು ಸುಲಭವಾಗಿ ಬಿಡಲ್ಲ ಎಂದು ಸವಾಲು ಹಾಕಿದ್ದಾರೆ.
ಇನ್ನು ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗ ಗಲಭೆ ದೊಂಬಿಯಲ್ಲಿ ಭಾಗಿಯಾಗಿದ್ದ 1600 ದುರುಳರ ವಿರುದ್ಧ 175 ಪ್ರಕರಣಗಳನ್ನ ಖುಲಾಸೆ ಮಾಡಿದ್ದಾರೆ. ಆ ಎಲ್ಲಾ ಪ್ರಕರಣಗಳನ್ನು ವಾಪಸ್ ತೆಗೆದುಕೊಂಡು ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ. ಕೊಡಗಿನಲ್ಲಿ ಕುಟ್ಟಪ್ಪ ಹತ್ಯೆ, ಬೆಂಗಳೂರು ರುದ್ರೇಶ್ ಹತ್ಯೆ, ಮೈಸೂರಿನಲ್ಲಿ ರಾಜು ಹತ್ಯೆ ಆಯಿತು. ರಾಜು ಹತ್ಯೆ ಆದ ಬಳಿಕ ಮಸೀದಿ ಬಂದ್ ಮಾಡಿಸಿದ್ದೆವು. ಇವತ್ತು ಸಿದ್ದರಾಮಯ್ಯ ಅವರು ಬಂದ ಮೇಲೆ ಬಂದ್ ಆಗಿರುವ ಮಸೀದಿಯನ್ನ ಓಪನ್ ಮಾಡಲು ಮುಂದಾಗಿದ್ದಾರೆ. ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆದಿದ್ದಾರೆ. ಪೂರಕ ದಾಖಲೆಗಳನ್ನು ತೆಗೆದುಕೊಂಡು ಸಭೆಗೆ ಹಾಜರಾಗಬೇಕು ಎಂದು ಹೇಳಿದ್ದಾರೆ. ರೆಸಿಡೆನ್ಸಿ ಸೈಟ್ ನಲ್ಲಿ ಮಸೀದಿ ಮಾಡಿರುವುದೇ ಮೊದಲನೇ ತಪ್ಪು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಇನ್ನು ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ನಡೀತಾ ಇದೆ. ದಾಖಲೆಯನ್ನು ನಾವು ಯಾಕೆ ಕೊಡಬೇಕು.? ಇದನ್ನ ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಯಾವುದೇ ಕಾರಣಕ್ಕೂ ಆ ಮಸೀದಿಯನ್ನು ತೆರೆಯಲು ಬಿಡಲ್ಲ. ನಿಮ್ಮ ಉದ್ದೇಶ ಏನು? ನಿಮಗೆ ಮಸ್ಲಿಂಮರ ವೋಟ್ ಬಿಟ್ಟರೆ ಬೇರೆಯವರ ವೋಟ್ ಬೇಡವಾ.? 5 ವರ್ಷ ಏನೂ ಮಾಡಕ್ಕಾಗಲ್ಲ ಅಂದುಕೊಂಡಿದ್ದೀರಾ ಎಂದು ಪ್ರಶ್ನೆ ಮಾಡಿದರು.
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…