ಮೈಸೂರು ನಗರ

ಮೈಸೂರಿನ ಕ್ಯಾತಮಾರನಹಳ್ಳಿ ಮಸೀದಿ ರೀಓಪನ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ

ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ರೀ ಓಪನ್‌ಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೆಸಿಡೆನ್ಸಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮಸೀದಿಯನ್ನು ರೀಓಪನ್‌ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಾನೊಬ್ಬ ಬಿಜೆಪಿ ಕಾರ್ಯಕರ್ತನಾಗಿ ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿ ಹೇಳುತ್ತೇನೆ. ತಾಕತ್ತಿದ್ದರೆ ಓಪನ್ ಮಾಡಿ ನೋಡಿ. ಆ ಮಸೀದಿ ರಾಜು ಹತ್ಯೆಯಾದ ಬಳಿಕ ಬಂದಾಗಿದೆ. ಈಗ ಅದನ್ನ ಓಪನ್ ಮಾಡೋಕೆ ಅಷ್ಟು ಸುಲಭವಾಗಿ ಬಿಡಲ್ಲ ಎಂದು ಸವಾಲು ಹಾಕಿದ್ದಾರೆ.

ಇನ್ನು ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗ ಗಲಭೆ ದೊಂಬಿಯಲ್ಲಿ ಭಾಗಿಯಾಗಿದ್ದ 1600 ದುರುಳರ ವಿರುದ್ಧ 175 ಪ್ರಕರಣಗಳನ್ನ ಖುಲಾಸೆ ಮಾಡಿದ್ದಾರೆ. ಆ ಎಲ್ಲಾ ಪ್ರಕರಣಗಳನ್ನು ವಾಪಸ್ ತೆಗೆದುಕೊಂಡು ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ. ಕೊಡಗಿನಲ್ಲಿ ಕುಟ್ಟಪ್ಪ ಹತ್ಯೆ, ಬೆಂಗಳೂರು ರುದ್ರೇಶ್ ಹತ್ಯೆ, ಮೈಸೂರಿನಲ್ಲಿ ರಾಜು ಹತ್ಯೆ ಆಯಿತು. ರಾಜು ಹತ್ಯೆ ಆದ ಬಳಿಕ ಮಸೀದಿ ಬಂದ್ ಮಾಡಿಸಿದ್ದೆವು‌. ಇವತ್ತು ಸಿದ್ದರಾಮಯ್ಯ ಅವರು ಬಂದ ಮೇಲೆ ಬಂದ್ ಆಗಿರುವ ಮಸೀದಿಯನ್ನ ಓಪನ್ ಮಾಡಲು ಮುಂದಾಗಿದ್ದಾರೆ. ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆದಿದ್ದಾರೆ. ಪೂರಕ ದಾಖಲೆಗಳನ್ನು ತೆಗೆದುಕೊಂಡು ಸಭೆಗೆ ಹಾಜರಾಗಬೇಕು ಎಂದು ಹೇಳಿದ್ದಾರೆ. ರೆಸಿಡೆನ್ಸಿ ಸೈಟ್ ನಲ್ಲಿ ಮಸೀದಿ ಮಾಡಿರುವುದೇ ಮೊದಲನೇ ತಪ್ಪು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಇನ್ನು ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ನಡೀತಾ ಇದೆ. ದಾಖಲೆಯನ್ನು ನಾವು ಯಾಕೆ ಕೊಡಬೇಕು.? ಇದನ್ನ ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಯಾವುದೇ ಕಾರಣಕ್ಕೂ ಆ ಮಸೀದಿಯನ್ನು ತೆರೆಯಲು ಬಿಡಲ್ಲ. ನಿಮ್ಮ ಉದ್ದೇಶ ಏನು? ನಿಮಗೆ ಮಸ್ಲಿಂಮರ ವೋಟ್ ಬಿಟ್ಟರೆ ಬೇರೆಯವರ ವೋಟ್ ಬೇಡವಾ.? 5 ವರ್ಷ ಏನೂ ಮಾಡಕ್ಕಾಗಲ್ಲ ಅಂದುಕೊಂಡಿದ್ದೀರಾ ಎಂದು ಪ್ರಶ್ನೆ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

5 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

11 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

12 hours ago