ಮೈಸೂರು ನಗರ

ಕೆಆರ್‌ಎಸ್‌ ರಸ್ತೆಗೆ ಎಸ್‌.ಎಂ.ಕೃಷ್ಣ ಹೆಸರಿಡಲು ಎಲ್‌.ನಾಗೇಂದ್ರ ಆಗ್ರಹ

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಬಿಜೆಪಿ ನಗರ ಜಿಲ್ಲಾಧ್ಯಕ್ಷ ಎಲ್‌.ನಾಗೇಂದ್ರ ಆಗ್ರಹಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್‌.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಕಾಲದಲ್ಲಿ ಮೈಸೂರಿನ ಹೊರ ವಲಯ ರಸ್ತೆಯಲ್ಲಿ ರಿಂಗ್ ರೋಡ್ ನಿರ್ಮಾಣ ಆಗಿದೆ. ಹಾಗಾಗಿ ಅಂತಹ ಮಹನೀಯರ ಹೆಸರನ್ನು ಕೆಆರ್‌ಎಸ್‌ ರಸ್ತೆಗೆ ನಾಮಕರಣ ಮಾಡಬೇಕು ಎಂದಿದ್ದಾರೆ.

ಕೆ.ಆರ್.ಎಸ್ ರಸ್ತೆಗೆ ಈ ಹಿಂದೆ ಪ್ರಿನ್ಸೆಸ್ ರಸ್ತೆ ಎಂದು ಮೈಸೂರು ಸಂಸ್ಥಾನದ ರಾಜಕುಮಾರಿ ಹೆಸರಿತ್ತು. ಆದರೆ ರಾಜಕುಮಾರಿ ಟಿಬಿ ಕಾಯಿಲೆಯಿಂದ ತೀರಿ ಹೋದರು. ಇನ್ನೂ ಯಾರು ಈ ಕಾಯಿಲೆಯಿಂದ ಮೃತರಾಗಬಾರದು ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ 100 ಎಕರೆ ಜಾಗದಲ್ಲಿ ಪಿಕೆಟಿಬಿ ಆಸ್ಪತ್ರೆ ಕಟ್ಟಿಸಿದ್ದರು. ಬಳಿಕ ರಾಜಕುಮಾರಿ ನೆನಪಿನಾರ್ಥ ಆಸ್ಪತ್ರೆಯಿರುವ ರಸ್ತೆಗೆ ಪ್ರಿನ್ಸೆಸ್ ರಸ್ತೆ ( ರಾಜಕುಮಾರಿ ರಸ್ತೆ) ಎಂದು ನಾಮಕರಣ ಮಾಡಿದ್ದರು. ಇದೀಗ ಆ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರು ನಾಮಕರಣ ಮಾಡಲು ಹೊರಟ್ಟಿದ್ದಾರೆ. ಅದಕ್ಕೆ ಇಲ್ಲಿನ ಸ್ಥಳೀಯ ಶಾಸಕರೇ ಸಿದ್ದರಾಮಯ್ಯ ಹೆಸರನ್ನು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಮೈಸೂರಿನವರಾಗಿದ್ದು, 2 ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಇನ್ನು ಮೈಸೂರಿನಲ್ಲಿ ಸಾಕಷ್ಟು ಬೇರೆ ಬೇರೆ ಮಾರ್ಗವಾಗಿ ರಸ್ತೆಗಳಿದ್ದು, ಅಲ್ಲಿಗೆ ಬೇಕಾದರೆ ಸಿದ್ದರಾಮಯ್ಯ ಹೆಸರನ್ನು ನಾಮಕರಣ ಮಾಡಲಿ ನಮ್ಮ ಅಭ್ಯಂತರವೇನಿಲ್ಲ ಎಂದಿದ್ದಾರೆ.

ರಸ್ತೆಗಳಿಗೆ ಹೆಸರನ್ನು ನಾಮಕರಣ ಮಾಡುವಾಗ ಸಾಮಾನ್ಯವಾಗಿ ಸಾಧನೆ ಮಾಡಿದ ವ್ಯಕ್ತಿಯ ಮರಣದ ಬಳಿಕ ಹೆಸರು ನಾಮಕರಣ ಮಾಡುತ್ತಾರೆ. ಬಹುಶಃ ಸಿದ್ದರಾಮಯ್ಯಗೆ ಹೆಸರು ಬದಲಾವಣೆ ವಿಚಾರ ಗೊತ್ತಿಲ್ಲ ಅನ್ನಿಸುತ್ತದೆ. ಈ ವಿಚಾರ ಗೊತ್ತಾದರೆ ಅವರೇ ಒಪ್ಪಲ್ಲ ಅನ್ನಿಸುತ್ತದೆ. ನಮ್ಮ ಒತ್ತಾಯ ಇಷ್ಟೇ ಆ ರಸ್ತೆಗೆ ಸಿದ್ದರಾಮಯ್ಯ ಹೆಸರು ಬೇಡ
ಬೇರೆ ರಸ್ತೆಗೆ ಸಿದ್ದರಾಮಯ್ಯ ಹೆಸರನ್ನು ನಾಮಕರಣ ಮಾಡಲಿ ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

2 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

2 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

5 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

6 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

11 hours ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

11 hours ago