ಮೈಸೂರು ನಗರ

ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ ಹಿನ್ನಡೆಗೆ ಕಾರಣ: ಪ್ರೊ. ಎಸ್.ಆರ್.ನಿರಂಜನ

ಮೈಸೂರು : ರೇಷ್ಮೆ ಕೃಷಿಯ ವಿಚಾರಗಳನ್ನು ತಿಳಿದುಕೊಳ್ಳದವರು ಪ್ರಾಯೋಗಿಕವಾಗಿ ಬೆಳೆಯಲಾರರು. ಹವಾಮಾನ ವೈಪರೀತ್ಯ, ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ ಹಿನ್ನಡೆಗೆ ಕಾರಣ ಎಂದು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಎಸ್.ಆರ್.ನಿರಂಜನ ಹೇಳಿದರು.

ನಗರದ ಮಾನಸ ಗಂಗೋತ್ರಿಯ ಮೈಸೂರು ವಿಶ್ವವಿದ್ಯಾನಿಲಯದ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗ ಮತ್ತು ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರದ ವತಿಯಿಂದ ಶನಿವಾರ ಆಯೋಜಿಸಿದ್ದ ‘ರೇಷ್ಮೆ ಕೃಷಿ ತಾಂತ್ರಿಕತೆಗಳ ಕುರಿತು ರಾಷ್ಟ್ರೀಯ ಪ್ರಾಯೋಗಿಕ ತರಬೇತಿ ಕಾಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಸಮಯದಲ್ಲಿ ಪ್ರಾಯೋಗಿಕ ಅವಕಾಶ ದೊರೆತರೆ, ಆ ಅನುಭವ ಕೃಷಿ ಭೂಮಿಯಲ್ಲಿ ಸಹಾಯ ಮಾಡುತ್ತದೆ. ಕೃಷಿಯಲ್ಲಿ ಮಣ್ಣಿನ ಪರೀಕ್ಷೆ ಮುಂತಾದ ವೈಜ್ಞಾನಿಕತೆ ಅಳವಡಿಕೆಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರೇಷ್ಮೆ ಕೃಷಿಯನ್ನು ವೈಜ್ಞಾನಿಕವಾಗಿ ಕೈಗೊಂಡರೆ ವರ್ಷದಲ್ಲಿ ಆರರಿಂದ ಏಳು ಬೆಳೆ ಪಡೆಯಬಹುದು. ರೇಷ್ಮೆಗೂಡಿಗೆ ನಿಖರವಾದ ಬೆಲೆ ಕೂಡ ಸಿಗಲಿದೆ. ಹಾಗಾಗಿ ರೈತರು ಸಾಂಪ್ರದಾಯಿ ಬೆಳೆಗೆ ಬದಲಾಗಿ ರೇಷ್ಮೆ ಬೆಳೆಯತ್ತ ಆಸಕ್ತಿ ವಹಿಸಬೇಕು. ಉತ್ತಮ ಗುಣಮಟ್ಟದ ಬೈವೋಲ್ಟೀನ್ ರೇಷ್ಮೆ ಉತ್ಪಾದನೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಹಲವು ರೇಷ್ಮೆ ಕೃಷಿಕರು ವಾರ್ಷಿಕ ಆದಾಯವನ್ನು ಗಳಿಸುತ್ತಿದ್ದಾರೆ ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಎನ್.ಕೆ.ಲೋಕನಾಥ್ ಮಾತನಾಡಿ, ರೇಷ್ಮೆ ಉತ್ಪಾದನೆಯಲ್ಲಿ ಭಾರತವು ಪ್ರಪಂಚದಲ್ಲಿ ಎರಡನೆಯ ಸ್ಥಾನದಲ್ಲಿದ್ದು, 2024-25ರ ಆರ್ಥಿಕ ವರ್ಷದಲ್ಲಿ 41.121 ಮೆಟ್ರಿಕ್‌ನಷ್ಟು ಉತ್ಪಾದನೆಯಾಗಿದ್ದು ಇದರಲ್ಲಿ ಹಿಪ್ಪು ನೇರಳೆ ರೇಷ್ಮೆಯು ಶೇ.75ರಷ್ಟು ಮತ್ತು ಹಿಪ್ಪು ನೇರಳೇತರ ರೇಷ್ಮೆಯು ಶೇ.25ರಷ್ಟು ಪಾಲಿರುತ್ತದೆ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ರೇಷ್ಮೆ ಕೃಷಿ ಮತ್ತು ರೇಷ್ಮೆ ಕೈಗಾರಿಕಾ ಚಟುವಟಿಕೆಗಳಿಂದ ವಾರ್ಷಿಕವಾಗಿ ಸುಮಾರು 92ಲಕ್ಷ ಜನಕ್ಕೆ ಉದ್ಯೋಗವಕಾಶಗಳು ದೊರೆಯುತ್ತಿವೆ ಎಂದು ವಿವರಿಸಿದರಲ್ಲದೆ, ರೇಷ್ಮೆ ಕೃಷಿಯನ್ನು ಉದ್ಯಮವನ್ನಾಗಿಸಲು ಈ ವಿಚಾರ ಸಂಕಿರಣವು ಸೂರ್ತಿಯಾಗಿರುತ್ತದೆ ಎಂಬುದಾಗಿ ಭಾವಿಸುತ್ತೇನೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಬಿ. ಸಣ್ಣಪ್ಪ, ಸಂಘಟನಾ ಕಾರ್ಯದರ್ಶಿ ಪ್ರೊ ಎಂ.ಎನ್.ಅನಿಲ್ ಕುಮಾರ್ ಇದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

14 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

17 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

23 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

29 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago