ಮೈಸೂರು ನಗರ

ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ ಹಿನ್ನಡೆಗೆ ಕಾರಣ: ಪ್ರೊ. ಎಸ್.ಆರ್.ನಿರಂಜನ

ಮೈಸೂರು : ರೇಷ್ಮೆ ಕೃಷಿಯ ವಿಚಾರಗಳನ್ನು ತಿಳಿದುಕೊಳ್ಳದವರು ಪ್ರಾಯೋಗಿಕವಾಗಿ ಬೆಳೆಯಲಾರರು. ಹವಾಮಾನ ವೈಪರೀತ್ಯ, ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ ಹಿನ್ನಡೆಗೆ ಕಾರಣ ಎಂದು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಎಸ್.ಆರ್.ನಿರಂಜನ ಹೇಳಿದರು.

ನಗರದ ಮಾನಸ ಗಂಗೋತ್ರಿಯ ಮೈಸೂರು ವಿಶ್ವವಿದ್ಯಾನಿಲಯದ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗ ಮತ್ತು ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರದ ವತಿಯಿಂದ ಶನಿವಾರ ಆಯೋಜಿಸಿದ್ದ ‘ರೇಷ್ಮೆ ಕೃಷಿ ತಾಂತ್ರಿಕತೆಗಳ ಕುರಿತು ರಾಷ್ಟ್ರೀಯ ಪ್ರಾಯೋಗಿಕ ತರಬೇತಿ ಕಾಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಸಮಯದಲ್ಲಿ ಪ್ರಾಯೋಗಿಕ ಅವಕಾಶ ದೊರೆತರೆ, ಆ ಅನುಭವ ಕೃಷಿ ಭೂಮಿಯಲ್ಲಿ ಸಹಾಯ ಮಾಡುತ್ತದೆ. ಕೃಷಿಯಲ್ಲಿ ಮಣ್ಣಿನ ಪರೀಕ್ಷೆ ಮುಂತಾದ ವೈಜ್ಞಾನಿಕತೆ ಅಳವಡಿಕೆಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರೇಷ್ಮೆ ಕೃಷಿಯನ್ನು ವೈಜ್ಞಾನಿಕವಾಗಿ ಕೈಗೊಂಡರೆ ವರ್ಷದಲ್ಲಿ ಆರರಿಂದ ಏಳು ಬೆಳೆ ಪಡೆಯಬಹುದು. ರೇಷ್ಮೆಗೂಡಿಗೆ ನಿಖರವಾದ ಬೆಲೆ ಕೂಡ ಸಿಗಲಿದೆ. ಹಾಗಾಗಿ ರೈತರು ಸಾಂಪ್ರದಾಯಿ ಬೆಳೆಗೆ ಬದಲಾಗಿ ರೇಷ್ಮೆ ಬೆಳೆಯತ್ತ ಆಸಕ್ತಿ ವಹಿಸಬೇಕು. ಉತ್ತಮ ಗುಣಮಟ್ಟದ ಬೈವೋಲ್ಟೀನ್ ರೇಷ್ಮೆ ಉತ್ಪಾದನೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಹಲವು ರೇಷ್ಮೆ ಕೃಷಿಕರು ವಾರ್ಷಿಕ ಆದಾಯವನ್ನು ಗಳಿಸುತ್ತಿದ್ದಾರೆ ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಎನ್.ಕೆ.ಲೋಕನಾಥ್ ಮಾತನಾಡಿ, ರೇಷ್ಮೆ ಉತ್ಪಾದನೆಯಲ್ಲಿ ಭಾರತವು ಪ್ರಪಂಚದಲ್ಲಿ ಎರಡನೆಯ ಸ್ಥಾನದಲ್ಲಿದ್ದು, 2024-25ರ ಆರ್ಥಿಕ ವರ್ಷದಲ್ಲಿ 41.121 ಮೆಟ್ರಿಕ್‌ನಷ್ಟು ಉತ್ಪಾದನೆಯಾಗಿದ್ದು ಇದರಲ್ಲಿ ಹಿಪ್ಪು ನೇರಳೆ ರೇಷ್ಮೆಯು ಶೇ.75ರಷ್ಟು ಮತ್ತು ಹಿಪ್ಪು ನೇರಳೇತರ ರೇಷ್ಮೆಯು ಶೇ.25ರಷ್ಟು ಪಾಲಿರುತ್ತದೆ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ರೇಷ್ಮೆ ಕೃಷಿ ಮತ್ತು ರೇಷ್ಮೆ ಕೈಗಾರಿಕಾ ಚಟುವಟಿಕೆಗಳಿಂದ ವಾರ್ಷಿಕವಾಗಿ ಸುಮಾರು 92ಲಕ್ಷ ಜನಕ್ಕೆ ಉದ್ಯೋಗವಕಾಶಗಳು ದೊರೆಯುತ್ತಿವೆ ಎಂದು ವಿವರಿಸಿದರಲ್ಲದೆ, ರೇಷ್ಮೆ ಕೃಷಿಯನ್ನು ಉದ್ಯಮವನ್ನಾಗಿಸಲು ಈ ವಿಚಾರ ಸಂಕಿರಣವು ಸೂರ್ತಿಯಾಗಿರುತ್ತದೆ ಎಂಬುದಾಗಿ ಭಾವಿಸುತ್ತೇನೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಬಿ. ಸಣ್ಣಪ್ಪ, ಸಂಘಟನಾ ಕಾರ್ಯದರ್ಶಿ ಪ್ರೊ ಎಂ.ಎನ್.ಅನಿಲ್ ಕುಮಾರ್ ಇದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago