ಮೈಸೂರು ನಗರ

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರತೀ ದಿನ ಕನಿಷ್ಠ 8 ತಾಸುಗಳ ಕಾಲ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸುವಂತೆ ಆಯಾ ಠಾಣೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಅದರಂತೆ ಭಾನುವಾರ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿದ ಪೊಲೀಸರು, ನಗರಕ್ಕೆ ಬರುವ ವಾಹನಗಳನ್ನು ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ವಿಶೇಷವಾಗಿ ಅನ್ಯರಾಜ್ಯಗಳ ವಾಹನಗಳ ಮೇಲೆ ತೀವ್ರ ನಿಗಾ ವಹಿಸಿ ತಪಾಸಣೆ ನಡೆಸುತ್ತಿದ್ದಾರೆ.

ನಗರದ ಕೈಗಾರಿಕಾ ಬಡಾವಣೆಗಳು, ರಾಸಾಯನಿಕ ಕಾರ್ಖಾನೆಗಳು, ಜನನಿಬಿಡ ಪ್ರದೇಶದಿಂದ ದೂರವಿರುವ ಒಂಟಿ ಮನೆಗಳ ಪರಿಶೀಲನೆಗೆ ಪೊಲೀಸರು ಒತ್ತು ನೀಡಿದ್ದಾರೆ. ಹೊರ ವರ್ತುಲ ರಸ್ತೆಯ ಅಂಚಿನಲ್ಲಿ ಇರುವ ಶೆಡ್‌ಗಳು ಹಾಗೂ ಮನೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇದಕ್ಕಾಗಿ ಸಂಚಾರ ವಿಭಾಗ, ಶ್ವಾನದಳ, ಅಪರಾಧ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರನ್ನು ಅಧಿಕಾರಿಗಳೊಂದಿಗೆ ಜೋಡಿಸಿದ್ದಾರೆ. ಪ್ರತೀ ದಿನ ಬೆಳಿಗ್ಗೆ 4 ತಾಸು ಹಾಗೂ ಸಂಜೆ ನಂತರ ನಾಲ್ಕು ತಾಸು ಪರಿಶೀಲನಾ ಕಾರ್ಯ ನಡೆಯಲಿದೆ. ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಆಯುಕ್ತರು ಮನವಿ ಮಾಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

5 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

6 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

6 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

6 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

6 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

7 hours ago