ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರತೀ ದಿನ ಕನಿಷ್ಠ 8 ತಾಸುಗಳ ಕಾಲ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸುವಂತೆ ಆಯಾ ಠಾಣೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅದರಂತೆ ಭಾನುವಾರ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿದ ಪೊಲೀಸರು, ನಗರಕ್ಕೆ ಬರುವ ವಾಹನಗಳನ್ನು ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ವಿಶೇಷವಾಗಿ ಅನ್ಯರಾಜ್ಯಗಳ ವಾಹನಗಳ ಮೇಲೆ ತೀವ್ರ ನಿಗಾ ವಹಿಸಿ ತಪಾಸಣೆ ನಡೆಸುತ್ತಿದ್ದಾರೆ.
ನಗರದ ಕೈಗಾರಿಕಾ ಬಡಾವಣೆಗಳು, ರಾಸಾಯನಿಕ ಕಾರ್ಖಾನೆಗಳು, ಜನನಿಬಿಡ ಪ್ರದೇಶದಿಂದ ದೂರವಿರುವ ಒಂಟಿ ಮನೆಗಳ ಪರಿಶೀಲನೆಗೆ ಪೊಲೀಸರು ಒತ್ತು ನೀಡಿದ್ದಾರೆ. ಹೊರ ವರ್ತುಲ ರಸ್ತೆಯ ಅಂಚಿನಲ್ಲಿ ಇರುವ ಶೆಡ್ಗಳು ಹಾಗೂ ಮನೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇದಕ್ಕಾಗಿ ಸಂಚಾರ ವಿಭಾಗ, ಶ್ವಾನದಳ, ಅಪರಾಧ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರನ್ನು ಅಧಿಕಾರಿಗಳೊಂದಿಗೆ ಜೋಡಿಸಿದ್ದಾರೆ. ಪ್ರತೀ ದಿನ ಬೆಳಿಗ್ಗೆ 4 ತಾಸು ಹಾಗೂ ಸಂಜೆ ನಂತರ ನಾಲ್ಕು ತಾಸು ಪರಿಶೀಲನಾ ಕಾರ್ಯ ನಡೆಯಲಿದೆ. ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಆಯುಕ್ತರು ಮನವಿ ಮಾಡಿದ್ದಾರೆ.
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…