ಮೈಸೂರು ನಗರ

ಪೊಲೀಸ್‌ ಇಲಾಖೆಗೆ ಕಾನೂನು ಅಷ್ಟೇ ಮುಖ್ಯ: ಜಿ.ಪರಮೇಶ್ವರ್‌

ಮೈಸೂರು: ರಾಜ್ಯ ಪೊಲೀಸ್‌ ಇಲಾಖೆಗೆ ಕಾನೂನು ಅಷ್ಟೇ ಮುಖ್ಯ, ಅವರನ್ನು ಯಾರಿಂದಲೂ ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವರ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.

ಅವಹೇಳನಕಾರಿ ಪೋಸ್ಟ್‌ ಸಂಬಂಧ, ಇಂದು ಉದಯಗಿರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಘಟನೆಯಲ್ಲಿ ಯಾರೇ ಇದ್ದರೂ ಶಿಕ್ಷೆ ಆಗುತ್ತೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನೆ ಇರುವುದಿಲ್ಲ. ಈ ಘಟನೆಯ ಬಗ್ಗೆ ಮಾಹಿತಿ ಪಡೆಯಲು ಇಲ್ಲಿಗೆ ಬಂದಿದ್ದೇನೆ. ತನಿಖೆಗೆ ಆದೇಶ ಮಾಡಿರುವುದರಿಂದ ಇದರ ಹಿಂದೆ ಯಾರಿದ್ದಾರೆ, ಏನೆಲ್ಲಾ ಚರ್ಚೆ ಆಗಿದೆ ಅದೆಲ್ಲ ಹೇಳೋಕೆ ಆಗೋದಿಲ್ಲ. ಪೊಲೀಸ್‌ ಠಾಣೆಗೆ ಕಲ್ಲು ತೂರಿದವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.

ಉತ್ತರ ಪ್ರದೇಶದ ಸ್ಥಿತಿ ನಮ್ಮ ರಾಜ್ಯದಲ್ಲಿ ಇಲ್ಲ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ. ಘಟನೆ ಸಂಬಂಧ ಪೊಲೀಸರು ತೆಗೆದುಕೊಂಡ ಕ್ರಮದ ಬಗ್ಗೆ ಯಾರೂ ಏನೇ ಹೇಳಿದರೂ ನಾನು ಪ್ರತಿಕ್ರಿಯೆ ನೀಡಲ್ಲ. ಪೊಲೀಸರಿಗೆ ಕಾನೂನು ಮುಖ್ಯ, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತಾರೆ. ಅವರನ್ನು ಯಾರಿಂದಲೂ ಕುಗ್ಗಿಸೋಕೆ ಸಾಧ್ಯವಿಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

14 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

17 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

25 mins ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

30 mins ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

33 mins ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

38 mins ago