arun kumar
ಮೈಸೂರು: ಕೂಡಲೇ ನಾಗಮೋಹನ್ ದಾಸ್ ವರದಿ ಬಿಡುಗಡೆಯಾಗಬೇಕು ಎಂದು ಸಾಮಾಜಿಕ ನ್ಯಾಯ ಪರ ವಕೀಲರ ಸಂಘದಿಂದ ಆಗ್ರಹಿಸಿದೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ಅರುಣ್ ಕುಮಾರ್ ಅವರು, ಈ ರಾಜ್ಯದಲ್ಲಿ ಮಾದಿಗರೇ ಜನಸಂಖ್ಯೆಯಲ್ಲಿ ನಂಬರ್ ಒನ್. ಎಲ್ಲಾ ವರದಿಗಳಲ್ಲೂ ನಾವೇ ನಂಬರ್ ಒನ್ ಆಗಿದ್ದೇವೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿ ಯಥಾವತ್ತಾಗಿ ಜಾರಿಗೆ ತನ್ನಿ ಎಂದು ಆಗ್ರಹಿಸಿದರು.
ಇನ್ನು ನಾಗಮೋಹನ್ ದಾಸ್ ಸಮಿತಿ 6,60,583 ಪುಟಗಳ ವರದಿ ಸಲ್ಲಿಸಿದೆ. ಆದರೆ ಅದರಲ್ಲಿ ಕೇವಲ 1667 ಪುಟಗಳ ವರದಿ ಸಲ್ಲಿಸಿದ್ದಾರೆ. ಅದರಲ್ಲೂ 332 ಪುಟಗಳನ್ನು ಮಾತ್ರ ಹೊರಗಡೆ ಬಿಟ್ಟಿದ್ದಾರೆ. ಒಬ್ಬ ಹೊಲಯನು ನಮಗೆ ಬೇಡ. ಸತ್ಯವನ್ನು ಗಟ್ಟಿಯಾಗಿ ನೇರವಾಗಿ ಹೇಳಿದ್ದೇವೆ. ಹೊಲೆಯರಿಗೆ ಸಮೀಕ್ಷೆ ನಡೆಯುವ ಸಂದರ್ಭದಲ್ಲಿ ಯಾವುದೇ ವಿರೋಧವಿರಲಿಲ್ಲ.
ನಾಗಮೋಹನ್ ದಾಸ್ ಕಮಿಷನ್ ಆಗಬೇಕು ಎಂದವರು ಹೊಲೆಯ ಸಮುದಾಯವರು. ಪ್ರತಿಭಟನೆ ಮಾಡುವ ಸ್ವಾಮೀಜಿ ಕೂಡ ಸದಾಶಿವ ಅವರನ್ನೇ ನೇಮಕ ಮಾಡಿ ಎಂದಿದ್ದರು. ಮಾದಿಗರು ಹೊಲೆಯರು ಅಣ್ಣ ತಮ್ಮಂದಿರು ಎಂದು ಹೇಳುತ್ತೀರಾ. ಇದೇನಾ ಅಣ್ಣ ತಮ್ಮ ನಡೆದುಕೊಳ್ಳುವ ರೀತಿ. ಒಬ್ಬ ಹೊಳೆಯನು ಮಾದಿಗ ಗುಂಪಿಗೆ ಬೇಡ. ಮೀಸಲಾತಿ ವರ್ಗಿಕರಣದ ಊಟದಲ್ಲಿ ಮಾದಿಗರಿಗೆ ಕಸ ಕಡ್ಡಿಯೂ ಸಿಕ್ಕಿಲ್ಲ. ಹೊಲೆಯರನ್ನ ನಮ್ಮ ಗುಂಪಿಗೆ ಸೇರಿಸಿ ಅನುಕೂಲ ಪಡೆದುಕೊಳ್ಳುತ್ತಿವಾ? ಪರಿಶಿಷ್ಟ ವರ್ಗದ ವರ್ಗೀಕರಣ ಸರಿಯಾಗಿ ಹಂಚಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ಕೂಡಲೇ ನಾಗಮೋಹನ್ ದಾಸ್ ವರದಿ ಯಥಾವತ್ತಾಗಿ ಬಿಡುಗಡೆಯಾಗಲಿ ಎಂದು ಆಗ್ರಹಿಸಿದರು.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…