ಮೈಸೂರು ನಗರ

ಕೂಡಲೇ ನಾಗಮೋಹನ್ ದಾಸ್ ವರದಿ ಬಿಡುಗಡೆಯಾಗಲಿ: ವಕೀಲ ಅರುಣ್‌ ಕುಮಾರ್‌ ಆಗ್ರಹ

ಮೈಸೂರು: ಕೂಡಲೇ ನಾಗಮೋಹನ್‌ ದಾಸ್‌ ವರದಿ ಬಿಡುಗಡೆಯಾಗಬೇಕು ಎಂದು ಸಾಮಾಜಿಕ ನ್ಯಾಯ ಪರ ವಕೀಲರ ಸಂಘದಿಂದ ಆಗ್ರಹಿಸಿದೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ಅರುಣ್‌ ಕುಮಾರ್‌ ಅವರು, ಈ ರಾಜ್ಯದಲ್ಲಿ ಮಾದಿಗರೇ ಜನಸಂಖ್ಯೆಯಲ್ಲಿ ನಂಬರ್ ಒನ್. ಎಲ್ಲಾ ವರದಿಗಳಲ್ಲೂ ನಾವೇ ನಂಬರ್ ಒನ್ ಆಗಿದ್ದೇವೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿ ಯಥಾವತ್ತಾಗಿ ಜಾರಿಗೆ ತನ್ನಿ ಎಂದು ಆಗ್ರಹಿಸಿದರು.

ಇನ್ನು ನಾಗಮೋಹನ್ ದಾಸ್ ಸಮಿತಿ 6,60,583 ಪುಟಗಳ ವರದಿ ಸಲ್ಲಿಸಿದೆ. ಆದರೆ ಅದರಲ್ಲಿ ಕೇವಲ 1667 ಪುಟಗಳ ವರದಿ ಸಲ್ಲಿಸಿದ್ದಾರೆ. ಅದರಲ್ಲೂ 332 ಪುಟಗಳನ್ನು ಮಾತ್ರ ಹೊರಗಡೆ ಬಿಟ್ಟಿದ್ದಾರೆ. ಒಬ್ಬ ಹೊಲಯನು ನಮಗೆ ಬೇಡ. ಸತ್ಯವನ್ನು ಗಟ್ಟಿಯಾಗಿ ನೇರವಾಗಿ ಹೇಳಿದ್ದೇವೆ. ಹೊಲೆಯರಿಗೆ ಸಮೀಕ್ಷೆ ನಡೆಯುವ ಸಂದರ್ಭದಲ್ಲಿ ಯಾವುದೇ ವಿರೋಧವಿರಲಿಲ್ಲ.

ನಾಗಮೋಹನ್ ದಾಸ್ ಕಮಿಷನ್ ಆಗಬೇಕು ಎಂದವರು ಹೊಲೆಯ ಸಮುದಾಯವರು. ಪ್ರತಿಭಟನೆ ಮಾಡುವ ಸ್ವಾಮೀಜಿ ಕೂಡ ಸದಾಶಿವ ಅವರನ್ನೇ ನೇಮಕ ಮಾಡಿ ಎಂದಿದ್ದರು. ಮಾದಿಗರು ಹೊಲೆಯರು ಅಣ್ಣ ತಮ್ಮಂದಿರು ಎಂದು ಹೇಳುತ್ತೀರಾ. ಇದೇನಾ ಅಣ್ಣ ತಮ್ಮ ನಡೆದುಕೊಳ್ಳುವ ರೀತಿ. ಒಬ್ಬ ಹೊಳೆಯನು ಮಾದಿಗ ಗುಂಪಿಗೆ ಬೇಡ. ಮೀಸಲಾತಿ ವರ್ಗಿಕರಣದ ಊಟದಲ್ಲಿ ಮಾದಿಗರಿಗೆ ಕಸ ಕಡ್ಡಿಯೂ ಸಿಕ್ಕಿಲ್ಲ. ಹೊಲೆಯರನ್ನ ನಮ್ಮ ಗುಂಪಿಗೆ ಸೇರಿಸಿ ಅನುಕೂಲ ಪಡೆದುಕೊಳ್ಳುತ್ತಿವಾ? ಪರಿಶಿಷ್ಟ ವರ್ಗದ ವರ್ಗೀಕರಣ ಸರಿಯಾಗಿ ಹಂಚಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ಕೂಡಲೇ ನಾಗಮೋಹನ್ ದಾಸ್ ವರದಿ ಯಥಾವತ್ತಾಗಿ ಬಿಡುಗಡೆಯಾಗಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್‌ ಪ್ರಮಾಣ ವಚನ ಸ್ವೀಕಾರ

ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…

3 hours ago

ಹನೂರು | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌ : ತಪ್ಪಿದ ಭಾರಿ ಅನಾಹುತ

ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…

3 hours ago

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

5 hours ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

5 hours ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

6 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

7 hours ago