ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೂರುದಾರ ವಕೀಲ ಪ್ರದೀಪ್ ಕುಮಾರ್ ಪಟ್ಟು ಹಿಡಿದಿದ್ದು, ಮೈಸೂರಿನ ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶಗೆ ದೂರು ನೀಡಿದ್ದಾರೆ. ಈ ವೇಳೆ ದೂರಿಗೆ ಸ್ವೀಕೃತ ಪತ್ರ ಕೊಟ್ಟಿರುವ ಲೋಕಾಯುಕ್ತ ಎಸ್ಪಿ ವಿರುದ್ಧ ಪ್ರದೀಪ್ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಎಸ್ಪಿ ಜೊತೆಗೆ ಕೂಗಾಟ ನಡೆಸಿದ ಪ್ರದೀಪ್ ಕುಮಾರ್ ಅವರು, ನಾನು ಮೂರು ಭಾರಿ ದೂರು ಕೊಟ್ಟಿದ್ದೇನೆ. ಯಾವುದಕ್ಕೂ ಹಿಂಬರಹ ಕೊಟ್ಟಿಲ್ಲ, ಕೇವಲ ಸ್ವೀಕೃತ ಅಷ್ಟೇ ಕೊಡುತ್ತಿದ್ದಾರೆ. ಈಗಲೂ ನಿಮಗೆ ಕಳುಹಿಸುತ್ತೇವೆ ಅಂತಿದ್ದಾರೆ. ನನಗೆ ಹಿಂಬರಹ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದೇನೆ. ಅರ್ಧ ಗಂಟೆಗಳ ಕಾಲ ಕಾಲಾವಕಾಶ ಕೇಳಿದ್ದೇನೆ. ಹಿಂಬರಹ ಕೊಡುವವರೆಗೆ ನಾನು ಲೋಕಾಯುಕ್ತ ಕಚೇರಿ ಬಿಟ್ಟು ಹೋಗಲ್ಲ. ನಾನು ಈ ಸ್ಥಳದಲ್ಲೇ ಧರಣಿ ಮಾಡುತ್ತೇನೆ. ಹೈಕೋರ್ಟ್ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ. 17ಎ ಅಡಿಯಲ್ಲಿ ತನಿಖಾಧಿಕಾರಿ ಸ್ವತಂತ್ರವಾಗಿ ತನಿಖೆ ಮಾಡಬಹುದು ಎಂದಿದ್ದಾರೆ. ಈ ಅಂಶದ ಆಧಾರದ ಮೇಲೆ ನನ್ನ ದೂರಿನ ಅನ್ವಯ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಬಹುದು. ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಇತರ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲು ಮಾಡಬೇಕು. ಲೋಕಾಯುಕ್ತ ಅಧಿಕಾರಿಗಳ ನಡೆಯನ್ನ ಗಮನಿಸಿದರೆ ಸಿಎಂ ಅವರ ಒತ್ತಡಕ್ಕೆ ಒಳಗಾದಂತೆ ಕಾಣುತ್ತಿದೆ. ನಾನು ಈ ಬಗ್ಗೆ ಹೈಕೋರ್ಟ್ನಲ್ಲಿ ರಿಟ್ ಸಲ್ಲಿಸುವ ಚಿಂತನೆಯಲ್ಲಿದ್ದೇನೆ ಎಂದು ಕಿಡಿಕಾರಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…