ಮೈಸೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅ.30ರಂದು ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೊಬೈಲ್ ಫೋನ್ ಮೂಲಕ ಕಾಲೇಜಿನ ಡೀನ್ ವಿರುದ್ಧ ಸವಿತಾ ಸಮಾಜದ ಬಗ್ಗೆ ‘ಹಜಾಮ’ ಎಂಬ ಪದವನ್ನು ಬಳಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ ಣ್ ದೂರು ಸಲ್ಲಿಸಿದ್ದಾರೆ.
ಮೆಡಿಕಲ್ ಕಾಲೇಜಿನ ಡೀನ್ ಅವರನ್ನು ನಿಂದಿಸಿರುವುದು ಕೆಲ ಮಾಧ್ಯಮಗಳಲ್ಲಿ ಹಾಗೂ ಸೋಷಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದೆ. ಸಿ.ಟಿ.ರವಿ ಅವರು ನಿರಂತರವಾಗಿ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ಹೇಳಿಕೆಗಳನ್ನು ನೀಡುವುದಲ್ಲದೆ, ಸಮಾಜದಲ್ಲಿರುವ ಅಸ್ಪೃಶ್ಯ ಜಾತಿಗಳನ್ನು ನಿಂದಿಸುವ ಕೆಲಸ ಮಾಡುತ್ತಿರುತ್ತಾರೆ.
ಇದನ್ನೂ ಓದಿ:-ಸಾಮಾಜಿಕ ಕಾಳಜಿಯುಳ್ಳ ಸಿನಿಮಾ ಕಣ್ಮರೆ : ಸಿ.ಎಂ ವಿಷಾಧ
ನಾನು ಕಾಲೇಜಿಗೆ ಬರುತ್ತೇನೆ ಎಂದು ತಿಳಿಸಿದ್ದರೂ ನೀನು ಇನ್ನೂ ಬಂದಿಲ್ಲವಲ್ಲ, ನಾನೇನು ಸುಮ್ಮನೆ ಬಂದು ಹೋಗಲು ಹಜಾಮನ ಎಂದು ಮೊಬೈಲ್ನಿಂದ ಡೀನ್ ಅವರಿಗೆ ನಿಂದಿಸುವುದರ ಮೂಲಕ ಸವಿತಾ ಸಮಾಜವನ್ನು ಕೇವಲವಾಗಿ ಕಾಣುವ ರೀತಿ ಮಾತನಾಡಿದ್ದಾರೆ.
ಈ ಪದ ಬಳಸಲು ಕರ್ನಾಟಕ ರಾಜ್ಯದಲ್ಲಿ ನಿಷೇದವಿದೆ. ಇಂತಹ ಪದ ಬಳಕೆ ಮಾಡುವವರ ವಿರುದ್ಧ ಜಾತಿ ನಿಂದನೆ ಮತ್ತು ಕ್ರಿಮಿನಲ್ ಕೇಸ್ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ. ದಯಮಾಡಿ ಜಾತಿ ನಿಂದನೆ ಕೇಸ್ ದಾಖಲಿಸಿ ಕೂಡಲೇ ಕ್ರಮ ವಹಿಸಬೇಕು ಎಂದು ಕೋರಿ ದೇವರಾಜ ಪೊಲೀಸ್ ಠಾಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…