ಮೈಸೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅ.30ರಂದು ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೊಬೈಲ್ ಫೋನ್ ಮೂಲಕ ಕಾಲೇಜಿನ ಡೀನ್ ವಿರುದ್ಧ ಸವಿತಾ ಸಮಾಜದ ಬಗ್ಗೆ ‘ಹಜಾಮ’ ಎಂಬ ಪದವನ್ನು ಬಳಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ ಣ್ ದೂರು ಸಲ್ಲಿಸಿದ್ದಾರೆ.
ಮೆಡಿಕಲ್ ಕಾಲೇಜಿನ ಡೀನ್ ಅವರನ್ನು ನಿಂದಿಸಿರುವುದು ಕೆಲ ಮಾಧ್ಯಮಗಳಲ್ಲಿ ಹಾಗೂ ಸೋಷಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದೆ. ಸಿ.ಟಿ.ರವಿ ಅವರು ನಿರಂತರವಾಗಿ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ಹೇಳಿಕೆಗಳನ್ನು ನೀಡುವುದಲ್ಲದೆ, ಸಮಾಜದಲ್ಲಿರುವ ಅಸ್ಪೃಶ್ಯ ಜಾತಿಗಳನ್ನು ನಿಂದಿಸುವ ಕೆಲಸ ಮಾಡುತ್ತಿರುತ್ತಾರೆ.
ಇದನ್ನೂ ಓದಿ:-ಸಾಮಾಜಿಕ ಕಾಳಜಿಯುಳ್ಳ ಸಿನಿಮಾ ಕಣ್ಮರೆ : ಸಿ.ಎಂ ವಿಷಾಧ
ನಾನು ಕಾಲೇಜಿಗೆ ಬರುತ್ತೇನೆ ಎಂದು ತಿಳಿಸಿದ್ದರೂ ನೀನು ಇನ್ನೂ ಬಂದಿಲ್ಲವಲ್ಲ, ನಾನೇನು ಸುಮ್ಮನೆ ಬಂದು ಹೋಗಲು ಹಜಾಮನ ಎಂದು ಮೊಬೈಲ್ನಿಂದ ಡೀನ್ ಅವರಿಗೆ ನಿಂದಿಸುವುದರ ಮೂಲಕ ಸವಿತಾ ಸಮಾಜವನ್ನು ಕೇವಲವಾಗಿ ಕಾಣುವ ರೀತಿ ಮಾತನಾಡಿದ್ದಾರೆ.
ಈ ಪದ ಬಳಸಲು ಕರ್ನಾಟಕ ರಾಜ್ಯದಲ್ಲಿ ನಿಷೇದವಿದೆ. ಇಂತಹ ಪದ ಬಳಕೆ ಮಾಡುವವರ ವಿರುದ್ಧ ಜಾತಿ ನಿಂದನೆ ಮತ್ತು ಕ್ರಿಮಿನಲ್ ಕೇಸ್ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ. ದಯಮಾಡಿ ಜಾತಿ ನಿಂದನೆ ಕೇಸ್ ದಾಖಲಿಸಿ ಕೂಡಲೇ ಕ್ರಮ ವಹಿಸಬೇಕು ಎಂದು ಕೋರಿ ದೇವರಾಜ ಪೊಲೀಸ್ ಠಾಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…