ಮೈಸೂರು ನಗರ

ಬಹುಶಿಸ್ತೀಯ ವಿಷಯ ಕಲಿಯುವುದರಿಂದ ಬೌದ್ಧಿಕ ಶಕ್ತಿ ವೃದ್ಧಿ: ಡಾ.ಕೆ.ಶಿವಕುಮಾರ್

ಮೈಸೂರು: ಬಹುಶಿಸ್ತೀಯ ವಿಷಯಗಳನ್ನು ಕಲಿಯುವುದರಿಂದ ವಿದ್ಯಾರ್ಥಿಗಳ ಬೌದ್ಧಿಕ ಶಕ್ತಿ ವೃದ್ಧಿಸುವುದಲ್ಲದೇ ಭವಿಷ್ಯದ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕೇರಳದ ಕೇಂದ್ರೀಯ ವಿವಿಯ ಸ್ಕೂಲ್ ಆಫ್ ಫಿಸಿಕಲ್ ಸೈನ್ಸಸ್‌ನ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಕೆ.ಶಿವಕುವಾರ್ ತಿಳಿಸಿದರು.

ನಗರದ ಕೃಷ್ಣಮೂರ್ತಿಪುರಂ ಬಡಾವಣೆಯಲ್ಲಿರುವ ಎಂಎಂಕೆ ಮತ್ತು ಎಸ್‌ಡಿಎಂ ಮಹಿಳಾ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಗಳಲ್ಲಿ ಉದಯೋನ್ಮುಖ ಪ್ರವೃತ್ತಿಗಳು ಮತ್ತು ಸವಾಲುಗಳು ವಿಷಯದ ಕುರಿತಾಗಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಕಾಲಘಟ್ಟದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವಿಲ್ಲದೇ ಯಾವ ಕೆಲಸ ಕಾರ್ಯವೂ ಪರಿಪೂರ್ಣಗೊಳ್ಳುವುದಿಲ್ಲ. ಆದ್ದರಿಂದ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಮೂಲಭೂತ ವಿಷಯಗಳು ಮತ್ತು ತಾತ್ವಿಕತೆಯನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪ್ರತಿಯೊಬ್ಬರೂ ಪ್ಲ್ಯಾಸ್ಟಿಕ್ ವಸ್ತುಗಳನ್ನು ಅತಿಯಾಗಿ ಬಳಕೆ ಮಾಡುತ್ತಿದ್ದಾರೆ. ಇದರಿಂದ ಪರಿಸರ ಮತ್ತು ಜೀವ ವೈವಿದ್ಯತೆಯ ಮೇಲೆ ಅಪಾರ ಹಾನಿ ಉಂಟಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ಲ್ಯಾಸ್ಟಿಕ್ ವಸ್ತುಗಳಿಂದ ಉಂಟಾಗುತ್ತಿರುವ ಹಾನಿಯನ್ನು ತಪ್ಪಿಸಬೇಕಾದರೆ, ಬಹುಬೇಗ ಮಣ್ಣಿನಲ್ಲಿ ಕರಗಿಹೋಗುವ ಜೈವಿಕ ಪ್ಲ್ಯಾಸ್ಟಿಕ್ ಪದಾರ್ಥಗಳ ಬಳಕೆಗೆ ಎಲ್ಲರೂ ಮುಂದಾಗಬೇಕು. ವಿಜ್ಞಾನ ವಿಷಯಗಳ ವಿದ್ಯಾರ್ಥಿಗಳು ಜೈವಿಕ ಪ್ಲ್ಯಾಸ್ಟಿಕ್ ವಸ್ತುಗಳನ್ನು ಬಳಸುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್.ಭಾರತಿ, ಐಕ್ಯೂಎಸಿ ಸಂಯೋಜಕರಾದ ಸುಕೃತಾ, ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎನ್.ಚೈತ್ರಾ, ರಾಸಾಯಣಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿ.ಪವಿತ್ರ, ಸಹಾಯಕ ಪ್ರಾಧ್ಯಾಪಕರಾದ ಡಾ.ಎಂ.ಚೈತ್ರಾ ಮಲ್ಲು, ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪಲ್ಲವಿ ಅಂಗಡಿ, ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಿ.ನಮ್ರತಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

26 mins ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

39 mins ago

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

2 hours ago

ಮಡಿಕೇರಿ: ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್:‌ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(‌24) ಆತ್ಮಹತ್ಯೆ ಮಾಡಿಕೊಂಡಿರುವ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ : ದೇಶವನ್ನು ಒಂದುಗೂಡಿಸಿದ ಖಾದಿ ಮಂತ್ರ

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ : ನಿದ್ದೆ ಇಲ್ಲದ ಇಂಗ್ಲೆಂಡಿನ ಮೊದಲ ದಿನಗಳು

ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…

7 hours ago