ಮೈಸೂರು ನಗರ

ಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಪ್ರತ್ಯಕ್ಷ: ಚಿರತೆ ಸೆರೆಗೆ 3ನೇ ದಿನವೂ ಮುಂದುವರೆದ ಕಾರ್ಯಾಚರಣೆ

ಮೈಸೂರು: ನಗರದ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಡಿ.31ರಂದು ಚಿರತೆಯ ಚಲನವಲನ ಕಂಡು ಬಂದಿದ್ದು, ಚಿರತೆ ಸೆರೆಗೆ ಅರಣ್ಯ ಇಲಾಖೆ ವತಿಯಿಂದ ಮೂರನೇ ದಿನವೂ ಕಾರ್ಯಾಚರಣೆ ಮುಂದುವರೆದಿದೆ.

ಈ ಕುರಿತು(ಜನವರಿ.2) ಮುಖ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಡಿಸಿಎಫ್‌ ಅಧಿಕಾರಿಗಳಾದ ಐ.ಬಿ.ಪ್ರಭುಗೌಡ ಹಾಗೂ ಬಸವರಾಜು ಅವರಿಂದ ಮಾಹಿತಿ ಪಡೆದಿದ್ದಾರೆ.

ಚಿರತೆ ಸೆರೆಗಾಗಿ ಇಲಾಖೆಯ 40 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆದಿದ್ದು, ಥರ್ಮಲ್‌ ಕ್ಯಾಮೆರಾ ಅಳವಡಿಸಿರುವ ಡ್ರೋನ್‌ ಮತ್ತು ಚಿರತೆ ಹೆಜ್ಜೆ ಗುರುತಿನ ಪತ್ತೆಗೆ ನಿರಂತರವಾಗಿ ಹುಡುಕಾಟ ನಡೆಸಿದರೂ ಕೂಡ ಕ್ಯಾಮೆರಾ ಟ್ರ್ಯಾಪ್‌, ಸಿಸಿಟಿವಿ ಕ್ಯಾಮೆರಾಗಳಲ್ಲಿ ಮೂರನೇ ದಿನವೂ ಸಹ ಚಿರತೆಯ ಚಲನವಲನ ಕಂಡು ಬಂದಿಲ್ಲ.

ಇನ್ನೂ ಇನ್ಫೋಸಿಸ್‌ ಕಂಪೆನಿಯೂ ತಮ್ಮ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ನಲ್ಲಿ ತಮ್ಮ ತಮ್ಮ ಕೆಲಸಗಳನ್ನು ಮನೆಯಲ್ಲಿಯೇ ನಿರ್ವಹಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಎಲ್ಲಾ ಸಿಬ್ಬಂದಿಗಳು ಮನೆಯಿಂದಲೇ ತಮ್ಮ ಕಾರ್ಯ ನಿವರ್ವಹಿಸುತ್ತಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

8 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

8 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

8 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

9 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

9 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago