ಮೈಸೂರು: ನಗರದ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಡಿ.31ರಂದು ಚಿರತೆಯ ಚಲನವಲನ ಕಂಡು ಬಂದಿದ್ದು, ಚಿರತೆ ಸೆರೆಗೆ ಅರಣ್ಯ ಇಲಾಖೆ ವತಿಯಿಂದ ಮೂರನೇ ದಿನವೂ ಕಾರ್ಯಾಚರಣೆ ಮುಂದುವರೆದಿದೆ.
ಈ ಕುರಿತು(ಜನವರಿ.2) ಮುಖ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಡಿಸಿಎಫ್ ಅಧಿಕಾರಿಗಳಾದ ಐ.ಬಿ.ಪ್ರಭುಗೌಡ ಹಾಗೂ ಬಸವರಾಜು ಅವರಿಂದ ಮಾಹಿತಿ ಪಡೆದಿದ್ದಾರೆ.
ಚಿರತೆ ಸೆರೆಗಾಗಿ ಇಲಾಖೆಯ 40 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆದಿದ್ದು, ಥರ್ಮಲ್ ಕ್ಯಾಮೆರಾ ಅಳವಡಿಸಿರುವ ಡ್ರೋನ್ ಮತ್ತು ಚಿರತೆ ಹೆಜ್ಜೆ ಗುರುತಿನ ಪತ್ತೆಗೆ ನಿರಂತರವಾಗಿ ಹುಡುಕಾಟ ನಡೆಸಿದರೂ ಕೂಡ ಕ್ಯಾಮೆರಾ ಟ್ರ್ಯಾಪ್, ಸಿಸಿಟಿವಿ ಕ್ಯಾಮೆರಾಗಳಲ್ಲಿ ಮೂರನೇ ದಿನವೂ ಸಹ ಚಿರತೆಯ ಚಲನವಲನ ಕಂಡು ಬಂದಿಲ್ಲ.
ಇನ್ನೂ ಇನ್ಫೋಸಿಸ್ ಕಂಪೆನಿಯೂ ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ನಲ್ಲಿ ತಮ್ಮ ತಮ್ಮ ಕೆಲಸಗಳನ್ನು ಮನೆಯಲ್ಲಿಯೇ ನಿರ್ವಹಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಎಲ್ಲಾ ಸಿಬ್ಬಂದಿಗಳು ಮನೆಯಿಂದಲೇ ತಮ್ಮ ಕಾರ್ಯ ನಿವರ್ವಹಿಸುತ್ತಿದ್ದಾರೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…