ಮೈಸೂರು ನಗರ

ಪ್ರತಿಯೊಬ್ಬರು ತಾಯಿಯ ಹೆಸರಿನಲ್ಲಿ ಸಸಿ ನೆಟ್ಟು, ಪ್ರಕೃತಿಗೆ ಕೊಡುಗೆ ನೀಡಲಿ

ಮೈಸೂರಿನಲ್ಲಿ ನಡೆದ ಸ್ವಚ್ಚತಾ ಹೀ ಸೇವಾ ಅಭಿಯಾನದಲ್ಲಿ ಸಂಸದ ಯದುವೀರ್ ಒಡೆಯರ್ ಸಲಹೆ

ಮೈಸೂರು: ಗಾಂಧೀಜಿಯವರ ಕನಸಿನಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದೊಂದಿಗೆ ಸೆಪ್ಟೆಂಬರ್ 17 ರಿಂದ “ಸ್ವಚ್ಛತಾ ಹೀ ಸೇವಾ” ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಗಾಂಧಿ ಜಯಂತಿ ಅಂಗವಾಗಿ ಇಂದು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೇತೃತ್ವದಲ್ಲಿ , ಕೇಂದ್ರ ಸಂವಹನ ಇಲಾಖೆ, ಮೈಸೂರು ವತಿಯಿಂದ ಶ್ರಮದಾನ ನೆರವೇರಿತು.

ಮೈಸೂರು ಮಹಾನಗರ ಪಾಲಿಕೆ, ಜಯದೇವ ಆಸ್ಪತ್ರೆ, ಶೇಷಾದ್ರಿಪುರಂ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ದೇಶಾದ್ಯಂತ ನಡೆಯುತ್ತಿರುವ ಸ್ವಚ್ಛತಾ ಹೀ ಸೇವಾ ಅಭಿಯಾನವು ಮೈಸೂರಿನಲ್ಲೂ ಯಶಸ್ವಿಯಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವಿವಿಧ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಯೋಜನೆ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸ್ವಚ್ಛತೆ ಮತ್ತು ಸ್ವಚ್ಛತಾ ಹೀ ಸೇವೆ ಅಭಿಯಾನದ ಕುರಿತು ಜನರಿಗೆ ಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮತ್ತೊಂದು ಅಭಿಯಾನವಾದ, “ತಾಯಿಯ ಹೆಸರಿನಲ್ಲಿ ಒಂದು ಮರ” (ಏಕ್ ಪೇಡ್ ಮಾ ಕೇ ನಾಮ್) ಪ್ರಯುಕ್ತ ಸಂಸದರು ಮಾನಸ ಗಂಗೋತ್ರಿ ಆವರಣದಲ್ಲಿ ಸಪೋಟ ಹಾಗೂ ಸೀಬೆ ಸಸಿ ನೆಟ್ಟರು.

ಇದೇ ರೀತಿಯಾಗಿ ಪ್ರತಿಯೊಬ್ಬರು ತಮ್ಮ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಟ್ಟು, ಅದು ಮರವಾಗಿ ಪ್ರಕೃತಿಗೆ ಮಾನವನ ಕೊಡುಗೆಯಾಗಲಿ ಎಂದು ಸಂಸದರು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆ, ಮೈಸೂರಿನ ಕ್ಷೇತ್ರ ಪ್ರಚಾರಾಧಿಕಾರಿ ಶೃತಿ ಎಸ್.ಟಿ., ದರ್ಶನ್, ಮೈಸೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರು ಪ್ರಭಾಕರ್, ಆರೋಗ್ಯ ನಿರೀಕ್ಷಕರು ಪ್ರಕಾಶ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮಧುಕರ್ ಎಂ, ಜಯದೇವ ಆಸ್ಪತ್ರೆಯ ಡಾಕ್ಟರ್ ಪಶುಪತಿ, ಸಾರ್ವಜನಿಕ ಸಂಪರ್ಕಾಧಿಕಾರಿ ವಾಣಿ ಮೋಹನ್ ಹರೀಶ್ ಕುಮಾರ್ ಆಫೀಸರ್ ಹಾಗೂ ಜಯದೇವ ಆಸ್ಪತ್ರೆಯ ಆಡಳಿತ ಮತ್ತು ಸಿಬ್ಬಂದಿ ವರ್ಗ, ಶೇಷಾದ್ರಿಪುರಂ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ರಾಘವೇಂದ್ರ, ಸ್ವಯಂ ಸೇವಕರು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago