ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ ಸಂಘಚಾಲಕ ಮೋಹನ್ ಭಾಗವತ್ ಹೇಳಿದರು.
ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾಮಠದ ಆವರಣದಲ್ಲಿ ಜೆಎಸ್ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವದ 15ನೇ ವಿಶೇಷ ಉಪನ್ಯಾಸದಲ್ಲಿ ‘ರಾಷ್ಟ್ರೀಯ ಅಭಿವೃದ್ಧಿಗೆ ಸಾಮಾಜಿಕ ಸೌಹಾರ್ದತೆ ಪ್ರೇರಕ’ ವಿಷಯ ಕುರಿತು ಅವರು ಮಾತನಾಡಿದರು.
ಸಹೋದರರನ್ನು ಅಸ್ಪೃಶ್ಯರಾಗಿ ಶತಮಾನಗಳಿಂದ ದೂರವಿಡಲಾಗಿದೆ. ಹೀಗಾಗಿ ಅಂಬೇಡ್ಕರ್ ಅವರ ಸಂವಿಧಾನ ಸಭೆಯ ಭಾಷಣಗಳನ್ನು ಮತ್ತೊಮ್ಮೆ ಓದಿಕೊಳ್ಳಬೇಕಿದೆ. ರಾಜಕೀಯ ಮತ್ತು ಆರ್ಥಿಕ ಸಮಾನತೆಗಿಂತ ಸಾಮಾಜಿಕ ಸಮಾನತೆ ಮುಖ್ಯ ಎಂದು ಅಂಬೇಡ್ಕರ್ ಪ್ರತಿಪಾದಿಸಿದ್ದಾರೆ. ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಬೆಸೆಯುವ ಕೊಂಡಿಯೇ ಬಂಧುತ್ವ. ಈ ಬಂಧುತ್ವ-ಭಾವ ಇಲ್ಲದಿದ್ದರೆ ದೇಶದ ಸ್ವಾತಂತ್ರ್ಯ ಕಾಪಾಡಿಕೊಳ್ಳುವುದು ಕಷ್ಟ ಎಂದರು.
ಭಾಷೆ, ಜಾತಿ, ಪಂಗಡಗಳನ್ನು ಮೀರಿ ಬಂಧುತ್ವ ನೆಲೆಗೊಳ್ಳಬೇಕು. ಅಸ್ತಿತ್ವಕ್ಕಾಗಿ ಮತ್ತೊಬ್ಬರ ವಿರುದ್ಧ ಹೋರಾಟ ನಡೆಸುವುದು ಪಾಶ್ಚಾತ್ಯ ಪರಿಕಲ್ಪನೆಯಾಗಿದೆ. ಆದರೆ, ಭಾರತೀಯರು ಭ್ರಾತೃತ್ವ ಮತ್ತು ಪರಸ್ಪರ ಸಹಾಯದೊಂದಿಗೆ ನಾಗರಿಕತೆ ಕಟ್ಟಿದ್ದಾರೆ. ನಮ್ಮ ಸಮಾಜವು, ಪರೋಪಕಾರವೇ ಸೇವೆ, ಕರ್ತವ್ಯವೇ ಜೀವನದ ಪರಮ ಗುರಿಯೆಂದು ತಿಳಿದಿದೆ ಎಂದು ವಿವರಿಸಿದರು.
ಪಾಶ್ಚಾತ್ಯ ದೇಶಗಳಲ್ಲಿ ಸೊಸೈಟಿ ಎಂಬ ಪರಿಕಲ್ಪನೆ ಸಾಮಾಜಿಕ ಒಪ್ಪಂದದ ಸಿದ್ಧಾಂತದ ಮೇಲೆ ನಿರ್ಮಾಣವಾಗಿದೆ. ಅಲ್ಲಿ ಜನರು ಪರಸ್ಪರ ಸಹಕಾರ ಮತ್ತು ಲಾಭದ ಉದ್ದೇಶದಿಂದ ಒಟ್ಟಿಗೆ ಬದುಕುತ್ತಾರೆ. ಆದರೆ, ಭಾರತೀಯ ಸಮಾಜದ ಪರಿಕಲ್ಪನೆ ಅದಕ್ಕಿಂತ ಭಿನ್ನವಾಗಿದೆ. ಭಾರತದಲ್ಲಿ ಸಮಾಜವೆಂದರೆ ಕೇವಲ ಜನರ ಗುಂಪು ಅಥವಾ ಒಪ್ಪಂದದ ಆಧಾರದ ಮೇಲೆ ನಿರ್ಮಾಣವಾದ ವ್ಯವಸ್ಥೆಯಲ್ಲ, ದೀರ್ಘಕಾಲ ಒಟ್ಟಿಗೆ ಬದುಕಿ, ಪರಸ್ಪರ ಆತ್ಮೀಯತೆ, ಒಂದೇತನದ ಭಾವನೆ ಹಾಗೂ ಸಾಮೂಹಿಕ ಗುರಿಯನ್ನು ಹೊಂದಿರುವ ಜನರ ಸಮೂಹವೇ ಸಮಾಜ. ಕುಟುಂಬದಿಂದ ಆರಂಭವಾಗುವ ಈ ಒಗ್ಗಟ್ಟು ಪರಿಸರ, ಸಂಸ್ಕೃತಿ ಮತ್ತು ಜೀವನ ಮೌಲ್ಯಗಳ ಮೂಲಕ ವಿಸ್ತಾರಗೊಳ್ಳುತ್ತದೆ ಎಂದರು.
ನೀವು ನನಗೆ ಉಪಾಕಾರ ಮಾಡಿದರೂ ಮಾಡದಿದ್ದರೂ ನೀವು ನನ್ನವರೇ. ಆದ್ದರಿಂದ ನಾನು ಮಾಡುವ ಪ್ರತಿಯೊಂದು ಕಾರ್ಯವೂ ಇತರರ ಹಿತಕ್ಕಾಗಿ ಇರಬೇಕು ಎಂಬುದು ಭಾರತೀಯ ಸಮಾಜದ ಮೂಲ ಭಾವನೆ. ಪರೋಪಕಾರ ಮತ್ತು ಸೇವೆಯ ಮೌಲ್ಯಗಳೊಂದಿಗೆ ಉನ್ನತ ಜೀವನ ಸಾಽಸುವುದೇ ಭಾರತೀಯ ಸಮಾಜದ ಗುರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ರಾಷ್ಟ್ರವೆಂದರೆ ಕೇವಲ ರಾಜಕೀಯ ವ್ಯವಸ್ಥೆ ಅಥವಾ ಭೌಗೋಳಿಕ ಗಡಿಯಲ್ಲ. ಭೂಮಿ, ಜನರು, ಸಂಸ್ಕೃತಿ ಮತ್ತು ಸಾಮೂಹಿಕ ಚೇತನವೇ ರಾಷ್ಟ್ರದ ಮೂಲ ಅಂಶಗಳಾಗಿವೆ. ಭಾರತದಲ್ಲಿ ವಿವಿಧ ಆಡಳಿತ ವ್ಯವಸ್ಥೆ ಗಳು ಮತ್ತು ರಾಜ್ಯಗಳು ಇದ್ದರೂ ದೇಶದ ಏಕತೆಯ ಭಾವನೆ ಭೂಮಿಯೊಂದಿಗೆ ಹೊಂದಿರುವ ಆತ್ಮೀಯ ಸಂಬಂಧದಿಂದಲೇ ರೂಪುಗೊಂಡಿದೆ ಎಂದು ವಿಶ್ಲೇಷಿಸಿದರು.
ಭಾರತೀಯ ಸಮಾಜದ ಮೂಲಭೂತ ತತ್ವ ಅಂತರಂಗದಲ್ಲಿ ಏಕತೆ ಸಾಧಿಸುವುದೇ ಆಗಿದೆ. ಮಾನವ, ಸಮಾಜ ಮತ್ತು ಸೃಷ್ಟಿ ಪರಸ್ಪರ ಸಂಬಂಧ ಹೊಂದಿವೆ. ಮನುಷ್ಯ ಕೇವಲ ದೇಹ ಅಥವಾ ಮನಸ್ಸಲ್ಲ; ಆತ್ಮ ಎಂಬ ಶಕ್ತಿಯು ಇವೆಲ್ಲವನ್ನೂ ಒಂದಾಗಿ ಕಟ್ಟುತ್ತದೆ ಎಂದು ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…