ಮೈಸೂರು: ರಾಜ್ಯಪಾಲರ ನಡೆ ಖಂಡಿಸಿ ಮೈಸೂರು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ರಾಷ್ಟ್ರಪತಿಗಳಿಗೆ ಪತ್ರ ಚಳುವಳಿ ನಡೆಸಲಾಯಿತು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ 550 ಎಕರೆ ಜಮೀನನ್ನು ಗಣಿಗಾರಿಕೆ ನಡೆಸಲು ಅಕ್ರಮವಾಗಿ ಮಂಜೂರು ಮಾಡಿದ್ದಾರೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತರು ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಆದರೆ ರಾಜ್ಯಪಾಲರು ಕುಮಾರಸ್ವಾಮಿ ವಿರುದ್ಧ ಅಕ್ರಮದ ತನಿಖೆ ನಡೆಸಲು ಅನುಮತಿ ನೀಡದೇ ಕಾಲ ವಿಳಂಬ ಮಾಡುತ್ತಿದ್ದಾರೆ.
ಈ ನಡೆಯನ್ನು ಖಂಡಿಸಿ ರಾಷ್ಟ್ರಪತಿಗಳಿಗೆ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪತ್ರ ಚಳುವಳಿ ನಡೆಸಲಾಯಿತು.
ಈ ವೇಳೆ ಮೈಸೂರು ನಗರ ವಕ್ತಾರ ಎಸ್.ರಾಜೇಶ್, ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ರಾಜೇಂದ್ರ ಪಾಂಡವಪುರ, ರಂಗಸ್ವಾಮಿ, ಎಸ್.ಎ.ರಹೀಂ, ಸಿದ್ದರಾಜು, ರಾಜಣ್ಣ, ಕುಮಾರ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…