ಮೈಸೂರು: ಸದಾ ನಮ್ಮನ್ನು ಸಲಹುತ್ತಿರುವ ಭಗವಂತನ ಧ್ಯಾನ, ಜಪ, ತಪ ಮಾಡುವುದರಿಂದ ನಮ್ಮ ಬದುಕು ಕೂಡಾ ಸಾರ್ಥಕವಾಗುತ್ತದೆ ಎಂದು ಶ್ರೀ ಅದಮಾರು ಮಠದ ಪೀಠಾಧೀಶರಾದ ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಹೇಳಿದರು.
ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿಯ ವತಿಯಿಂದ ಭಕ್ತರ ಸಮಕ್ಷಮದಲ್ಲಿ ಮಹಾಮೃತ್ಯುಂಜಯ ಹೋಮ ನೆರವೇರಿತು ಅವರು ಆಶೀರ್ವಚನ ನೀಡಿದರು.
ಭಗವಂತನ ಶಾಂತ ಕೃಪಾದೃಷ್ಟಿ ನಮ್ಮ ಮೇಲೆ ಬೀಳಲಿ ಎನ್ನುವ ಉದ್ದೇಶದಿಂದ ನಾವೆಲ್ಲ ದೇವಸ್ಥಾನಗಳಿಗೆ ಹೋಗುತ್ತೇವೆ. ಭಗವಂತನ ಸ್ಮರಣೆ ಎಷ್ಟು ಮಾಡಿದರೂ ಕಡಿಮೆಯೇ. ಮನುಷ್ಯನ ನೆಮ್ಮದಿಗೆ ಭಗವಂತನೇ ಹಾದಿ ಎಂದರು.
ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಅವರು 7 ದಿನಗಳ ಪ್ರವಚನದ ಮಂಗಳ ನೇರವೆರಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ನ ಉಪಾಧ್ಯಕ್ಷರುಗಳಾದ ರವಿಶಾಸ್ತ್ರಿ ಮತ್ತು ಪಿ ಎಸ್ ಶೇಖರ್, ಕಾರ್ಯದರ್ಶಿಗಳಾದ ಕೆ ವಿ ಶ್ರೀಧರ್, ಶ್ರೀ ಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷರಾದ ಪಿ. ಜಿ. ಪ್ರವೀಣ್, ಮಿತ್ರ ಮಂಡಳಿಯ ಹಲವು ಸದಸ್ಯರು ಮತ್ತು ನೂರಾರು ಭಕ್ತಾದಿಗಳು ಭಾಗವಹಿಸಿದ್ದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…