ಮೈಸೂರು: ಸದಾ ನಮ್ಮನ್ನು ಸಲಹುತ್ತಿರುವ ಭಗವಂತನ ಧ್ಯಾನ, ಜಪ, ತಪ ಮಾಡುವುದರಿಂದ ನಮ್ಮ ಬದುಕು ಕೂಡಾ ಸಾರ್ಥಕವಾಗುತ್ತದೆ ಎಂದು ಶ್ರೀ ಅದಮಾರು ಮಠದ ಪೀಠಾಧೀಶರಾದ ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಹೇಳಿದರು.
ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿಯ ವತಿಯಿಂದ ಭಕ್ತರ ಸಮಕ್ಷಮದಲ್ಲಿ ಮಹಾಮೃತ್ಯುಂಜಯ ಹೋಮ ನೆರವೇರಿತು ಅವರು ಆಶೀರ್ವಚನ ನೀಡಿದರು.
ಭಗವಂತನ ಶಾಂತ ಕೃಪಾದೃಷ್ಟಿ ನಮ್ಮ ಮೇಲೆ ಬೀಳಲಿ ಎನ್ನುವ ಉದ್ದೇಶದಿಂದ ನಾವೆಲ್ಲ ದೇವಸ್ಥಾನಗಳಿಗೆ ಹೋಗುತ್ತೇವೆ. ಭಗವಂತನ ಸ್ಮರಣೆ ಎಷ್ಟು ಮಾಡಿದರೂ ಕಡಿಮೆಯೇ. ಮನುಷ್ಯನ ನೆಮ್ಮದಿಗೆ ಭಗವಂತನೇ ಹಾದಿ ಎಂದರು.
ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಅವರು 7 ದಿನಗಳ ಪ್ರವಚನದ ಮಂಗಳ ನೇರವೆರಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ನ ಉಪಾಧ್ಯಕ್ಷರುಗಳಾದ ರವಿಶಾಸ್ತ್ರಿ ಮತ್ತು ಪಿ ಎಸ್ ಶೇಖರ್, ಕಾರ್ಯದರ್ಶಿಗಳಾದ ಕೆ ವಿ ಶ್ರೀಧರ್, ಶ್ರೀ ಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷರಾದ ಪಿ. ಜಿ. ಪ್ರವೀಣ್, ಮಿತ್ರ ಮಂಡಳಿಯ ಹಲವು ಸದಸ್ಯರು ಮತ್ತು ನೂರಾರು ಭಕ್ತಾದಿಗಳು ಭಾಗವಹಿಸಿದ್ದರು.
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…