ಮೈಸೂರು ನಗರ

ಮೈಸೂರು ವಿಶ್ವವಿದ್ಯಾನಿಲಯ : ಸಾಹಿತಿ ವರಹಳ್ಳಿ ಆನಂದ ಸಂಶೋಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ಅಧ್ಯಕ್ಷರಾಗಿ ಯುವ ಸಾಹಿತಿ ವರಹಳ್ಳಿ ಆನಂದ ಚುನಾಯಿತರಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಮೈಸೂರು ವಿಶ್ವವಿದ್ಯಾನಿಲದಯ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ಪ್ರಬಲ ಪೈಪೋಟಿಯಲ್ಲಿ ಗೆದ್ದು ಸಂಭ್ರಮಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಸೇರಿದ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯ ವಿವಿಗಳಲ್ಲಿ ವಿವಿಧ ವಿಷಯಗಳಲ್ಲಿ ಸಂಶೋಧನೆ ನಡೆಸುತ್ತಿರುವ ಸಂಶೋಧಕ ಅಭ್ಯರ್ಥಿಗಳು ಮತ ಚಲಾಯಿಸಿದರು.

ಇದನ್ನು ಓದಿ:ಮೈಸೂರು| ಅಗ್ನಿ ಅವಘಡ: ವೃದ್ಧ ಸಜೀವ ದಹನ

539 ಒಟ್ಟು ಮತದಾನದಲ್ಲಿ ವರಹಳ್ಳಿ ಆನಂದ 144 ಮತಗಳನ್ನು ಪಡೆದು ವಿಜಯಶಾಲಿಯಾದರು. ಪ್ರಬಲ ಪೈಪೋಟಿ ನೀಡಿದ ಪರಾಜಿತ ಅಭ್ಯರ್ಥಿ ಮಹೇಶ್ 139 ಮತ ಪಡೆದು ಬೆರಳೆಣಿಕ ಮತ ಅಂತರದಲ್ಲಿ ಪರಭಾವಗೊಂಡರು.

ಉಳಿದಂತೆ ಮಲ್ಲೇಶ್ 57 ಮತ, ಅಭಿಷೇಕ್ 54, ಮದನ 51, ಲೋಕೇಶ್ 36, ರಾಜೇಶ್ ಚಾಕನಹಳ್ಳಿ 28, ನವೀನ್ 10, ಶೇಷಣ್ಣ 11 ಮತಗಳನ್ನು ಪಡೆದುಕೊಂಡರೆ 9 ನೋಟಾ ಮತ ಚಲಾವಣೆಗೊಂಡಿತು.

ಗೆಲುವಿನ ಸಂಭ್ರಮ
ತೀವ್ರ ಕುತೂಹಲದಿಂದ ಕೂಡಿದ್ದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ವಿಜಯಶಾಲಿಯಾದರು ಎಂಬ ಸುದ್ದಿ ತಿಳಿದು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಹೆಗಲ ಮೇಲೆ ಎತ್ತಿಕೊಂಡು ಜೈಕಾರ ಹಾಕಿ ಕುಣಿದು ಕುಪ್ಪಳಿಸಿದರು.

ಇದನ್ನು ಓದಿ:ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳದ ಮೇಲೆ ಅಂಟಿದ ಕಳಂಕ ದೂರ: ಶಾಸಕ ಹರೀಶ್‌ ಗೌಡ

ಹಣ, ಮದ್ಯದೊಳ
ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧನೆ ನಡೆಸುತ್ತಿರುವ ಅಭ್ಯರ್ಥಿಗಳಾದ ವಿವಿಯ ಸಂಶೋಧಕರ ಸಂಘ ಚುನಾವಣೆ ಆದರೂ ಹಣ, ಮದ್ಯದ ಹೊಳೆಯೂ ಹರಿದಿದೆ.

ಈಗಾಗಲೇ ದಲಿತ, ರೈತ, ಕಮ್ಯುನಿಸ್ಟ್ ಪಕ್ಷದ ಜನಪರ ಚಳವಳಿಗಳಲ್ಲಿ ಗುರುತಿಸಿಕೊಂಡಿರುವ ವರಹಳ್ಳಿ ಆನಂದ ‘ಬಂಗಾರಿ’ ಕಾದಂಬರಿಯ ಮೂಲಕ ಯುವ ಸಾಹಿತಿಯಾಗಿ ಪರಿಚಿತರಾಗಿದ್ದಾರೆ. ಪಿಎಚ್.ಡಿ ವಿದ್ಯಾರ್ಥಿಗಳಿಗೆ ಗೈಡ್‌ಗಳ ಕೊರತೆ ನೀಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಗೆ ತೆರಳಿ ಮನವಿ ಕೊಟ್ಟು ಹೋರಾಟ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

5 seconds ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

22 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

47 mins ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

54 mins ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

2 hours ago