ಮೈಸೂರು ನಗರ

ಮೈಸೂರು ವಿಶ್ವವಿದ್ಯಾನಿಲಯ : ಸಾಹಿತಿ ವರಹಳ್ಳಿ ಆನಂದ ಸಂಶೋಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ಅಧ್ಯಕ್ಷರಾಗಿ ಯುವ ಸಾಹಿತಿ ವರಹಳ್ಳಿ ಆನಂದ ಚುನಾಯಿತರಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಮೈಸೂರು ವಿಶ್ವವಿದ್ಯಾನಿಲದಯ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ಪ್ರಬಲ ಪೈಪೋಟಿಯಲ್ಲಿ ಗೆದ್ದು ಸಂಭ್ರಮಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಸೇರಿದ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯ ವಿವಿಗಳಲ್ಲಿ ವಿವಿಧ ವಿಷಯಗಳಲ್ಲಿ ಸಂಶೋಧನೆ ನಡೆಸುತ್ತಿರುವ ಸಂಶೋಧಕ ಅಭ್ಯರ್ಥಿಗಳು ಮತ ಚಲಾಯಿಸಿದರು.

ಇದನ್ನು ಓದಿ:ಮೈಸೂರು| ಅಗ್ನಿ ಅವಘಡ: ವೃದ್ಧ ಸಜೀವ ದಹನ

539 ಒಟ್ಟು ಮತದಾನದಲ್ಲಿ ವರಹಳ್ಳಿ ಆನಂದ 144 ಮತಗಳನ್ನು ಪಡೆದು ವಿಜಯಶಾಲಿಯಾದರು. ಪ್ರಬಲ ಪೈಪೋಟಿ ನೀಡಿದ ಪರಾಜಿತ ಅಭ್ಯರ್ಥಿ ಮಹೇಶ್ 139 ಮತ ಪಡೆದು ಬೆರಳೆಣಿಕ ಮತ ಅಂತರದಲ್ಲಿ ಪರಭಾವಗೊಂಡರು.

ಉಳಿದಂತೆ ಮಲ್ಲೇಶ್ 57 ಮತ, ಅಭಿಷೇಕ್ 54, ಮದನ 51, ಲೋಕೇಶ್ 36, ರಾಜೇಶ್ ಚಾಕನಹಳ್ಳಿ 28, ನವೀನ್ 10, ಶೇಷಣ್ಣ 11 ಮತಗಳನ್ನು ಪಡೆದುಕೊಂಡರೆ 9 ನೋಟಾ ಮತ ಚಲಾವಣೆಗೊಂಡಿತು.

ಗೆಲುವಿನ ಸಂಭ್ರಮ
ತೀವ್ರ ಕುತೂಹಲದಿಂದ ಕೂಡಿದ್ದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ವಿಜಯಶಾಲಿಯಾದರು ಎಂಬ ಸುದ್ದಿ ತಿಳಿದು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಹೆಗಲ ಮೇಲೆ ಎತ್ತಿಕೊಂಡು ಜೈಕಾರ ಹಾಕಿ ಕುಣಿದು ಕುಪ್ಪಳಿಸಿದರು.

ಇದನ್ನು ಓದಿ:ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳದ ಮೇಲೆ ಅಂಟಿದ ಕಳಂಕ ದೂರ: ಶಾಸಕ ಹರೀಶ್‌ ಗೌಡ

ಹಣ, ಮದ್ಯದೊಳ
ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧನೆ ನಡೆಸುತ್ತಿರುವ ಅಭ್ಯರ್ಥಿಗಳಾದ ವಿವಿಯ ಸಂಶೋಧಕರ ಸಂಘ ಚುನಾವಣೆ ಆದರೂ ಹಣ, ಮದ್ಯದ ಹೊಳೆಯೂ ಹರಿದಿದೆ.

ಈಗಾಗಲೇ ದಲಿತ, ರೈತ, ಕಮ್ಯುನಿಸ್ಟ್ ಪಕ್ಷದ ಜನಪರ ಚಳವಳಿಗಳಲ್ಲಿ ಗುರುತಿಸಿಕೊಂಡಿರುವ ವರಹಳ್ಳಿ ಆನಂದ ‘ಬಂಗಾರಿ’ ಕಾದಂಬರಿಯ ಮೂಲಕ ಯುವ ಸಾಹಿತಿಯಾಗಿ ಪರಿಚಿತರಾಗಿದ್ದಾರೆ. ಪಿಎಚ್.ಡಿ ವಿದ್ಯಾರ್ಥಿಗಳಿಗೆ ಗೈಡ್‌ಗಳ ಕೊರತೆ ನೀಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಗೆ ತೆರಳಿ ಮನವಿ ಕೊಟ್ಟು ಹೋರಾಟ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

10 mins ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

46 mins ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

2 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

2 hours ago

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…

2 hours ago

ಅಶ್ಲೀಲ ಮೆಸೇಜ್‌ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…

2 hours ago