ಮೈಸೂರು ನಗರ

ಮೈಸೂರು ವಿಶ್ವವಿದ್ಯಾನಿಲಯ : ಸಾಹಿತಿ ವರಹಳ್ಳಿ ಆನಂದ ಸಂಶೋಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ಅಧ್ಯಕ್ಷರಾಗಿ ಯುವ ಸಾಹಿತಿ ವರಹಳ್ಳಿ ಆನಂದ ಚುನಾಯಿತರಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಮೈಸೂರು ವಿಶ್ವವಿದ್ಯಾನಿಲದಯ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ಪ್ರಬಲ ಪೈಪೋಟಿಯಲ್ಲಿ ಗೆದ್ದು ಸಂಭ್ರಮಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಸೇರಿದ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯ ವಿವಿಗಳಲ್ಲಿ ವಿವಿಧ ವಿಷಯಗಳಲ್ಲಿ ಸಂಶೋಧನೆ ನಡೆಸುತ್ತಿರುವ ಸಂಶೋಧಕ ಅಭ್ಯರ್ಥಿಗಳು ಮತ ಚಲಾಯಿಸಿದರು.

ಇದನ್ನು ಓದಿ:ಮೈಸೂರು| ಅಗ್ನಿ ಅವಘಡ: ವೃದ್ಧ ಸಜೀವ ದಹನ

539 ಒಟ್ಟು ಮತದಾನದಲ್ಲಿ ವರಹಳ್ಳಿ ಆನಂದ 144 ಮತಗಳನ್ನು ಪಡೆದು ವಿಜಯಶಾಲಿಯಾದರು. ಪ್ರಬಲ ಪೈಪೋಟಿ ನೀಡಿದ ಪರಾಜಿತ ಅಭ್ಯರ್ಥಿ ಮಹೇಶ್ 139 ಮತ ಪಡೆದು ಬೆರಳೆಣಿಕ ಮತ ಅಂತರದಲ್ಲಿ ಪರಭಾವಗೊಂಡರು.

ಉಳಿದಂತೆ ಮಲ್ಲೇಶ್ 57 ಮತ, ಅಭಿಷೇಕ್ 54, ಮದನ 51, ಲೋಕೇಶ್ 36, ರಾಜೇಶ್ ಚಾಕನಹಳ್ಳಿ 28, ನವೀನ್ 10, ಶೇಷಣ್ಣ 11 ಮತಗಳನ್ನು ಪಡೆದುಕೊಂಡರೆ 9 ನೋಟಾ ಮತ ಚಲಾವಣೆಗೊಂಡಿತು.

ಗೆಲುವಿನ ಸಂಭ್ರಮ
ತೀವ್ರ ಕುತೂಹಲದಿಂದ ಕೂಡಿದ್ದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ವಿಜಯಶಾಲಿಯಾದರು ಎಂಬ ಸುದ್ದಿ ತಿಳಿದು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಹೆಗಲ ಮೇಲೆ ಎತ್ತಿಕೊಂಡು ಜೈಕಾರ ಹಾಕಿ ಕುಣಿದು ಕುಪ್ಪಳಿಸಿದರು.

ಇದನ್ನು ಓದಿ:ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳದ ಮೇಲೆ ಅಂಟಿದ ಕಳಂಕ ದೂರ: ಶಾಸಕ ಹರೀಶ್‌ ಗೌಡ

ಹಣ, ಮದ್ಯದೊಳ
ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧನೆ ನಡೆಸುತ್ತಿರುವ ಅಭ್ಯರ್ಥಿಗಳಾದ ವಿವಿಯ ಸಂಶೋಧಕರ ಸಂಘ ಚುನಾವಣೆ ಆದರೂ ಹಣ, ಮದ್ಯದ ಹೊಳೆಯೂ ಹರಿದಿದೆ.

ಈಗಾಗಲೇ ದಲಿತ, ರೈತ, ಕಮ್ಯುನಿಸ್ಟ್ ಪಕ್ಷದ ಜನಪರ ಚಳವಳಿಗಳಲ್ಲಿ ಗುರುತಿಸಿಕೊಂಡಿರುವ ವರಹಳ್ಳಿ ಆನಂದ ‘ಬಂಗಾರಿ’ ಕಾದಂಬರಿಯ ಮೂಲಕ ಯುವ ಸಾಹಿತಿಯಾಗಿ ಪರಿಚಿತರಾಗಿದ್ದಾರೆ. ಪಿಎಚ್.ಡಿ ವಿದ್ಯಾರ್ಥಿಗಳಿಗೆ ಗೈಡ್‌ಗಳ ಕೊರತೆ ನೀಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಗೆ ತೆರಳಿ ಮನವಿ ಕೊಟ್ಟು ಹೋರಾಟ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

6 seconds ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

6 mins ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

18 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

34 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

1 hour ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago