ಮೈಸೂರು ನಗರ

ಮೈಸೂರು ವಿಶ್ವವಿದ್ಯಾನಿಲಯ : ಸಾಹಿತಿ ವರಹಳ್ಳಿ ಆನಂದ ಸಂಶೋಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ಅಧ್ಯಕ್ಷರಾಗಿ ಯುವ ಸಾಹಿತಿ ವರಹಳ್ಳಿ ಆನಂದ ಚುನಾಯಿತರಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಮೈಸೂರು ವಿಶ್ವವಿದ್ಯಾನಿಲದಯ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ಪ್ರಬಲ ಪೈಪೋಟಿಯಲ್ಲಿ ಗೆದ್ದು ಸಂಭ್ರಮಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಸೇರಿದ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯ ವಿವಿಗಳಲ್ಲಿ ವಿವಿಧ ವಿಷಯಗಳಲ್ಲಿ ಸಂಶೋಧನೆ ನಡೆಸುತ್ತಿರುವ ಸಂಶೋಧಕ ಅಭ್ಯರ್ಥಿಗಳು ಮತ ಚಲಾಯಿಸಿದರು.

ಇದನ್ನು ಓದಿ:ಮೈಸೂರು| ಅಗ್ನಿ ಅವಘಡ: ವೃದ್ಧ ಸಜೀವ ದಹನ

539 ಒಟ್ಟು ಮತದಾನದಲ್ಲಿ ವರಹಳ್ಳಿ ಆನಂದ 144 ಮತಗಳನ್ನು ಪಡೆದು ವಿಜಯಶಾಲಿಯಾದರು. ಪ್ರಬಲ ಪೈಪೋಟಿ ನೀಡಿದ ಪರಾಜಿತ ಅಭ್ಯರ್ಥಿ ಮಹೇಶ್ 139 ಮತ ಪಡೆದು ಬೆರಳೆಣಿಕ ಮತ ಅಂತರದಲ್ಲಿ ಪರಭಾವಗೊಂಡರು.

ಉಳಿದಂತೆ ಮಲ್ಲೇಶ್ 57 ಮತ, ಅಭಿಷೇಕ್ 54, ಮದನ 51, ಲೋಕೇಶ್ 36, ರಾಜೇಶ್ ಚಾಕನಹಳ್ಳಿ 28, ನವೀನ್ 10, ಶೇಷಣ್ಣ 11 ಮತಗಳನ್ನು ಪಡೆದುಕೊಂಡರೆ 9 ನೋಟಾ ಮತ ಚಲಾವಣೆಗೊಂಡಿತು.

ಗೆಲುವಿನ ಸಂಭ್ರಮ
ತೀವ್ರ ಕುತೂಹಲದಿಂದ ಕೂಡಿದ್ದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ವಿಜಯಶಾಲಿಯಾದರು ಎಂಬ ಸುದ್ದಿ ತಿಳಿದು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಹೆಗಲ ಮೇಲೆ ಎತ್ತಿಕೊಂಡು ಜೈಕಾರ ಹಾಕಿ ಕುಣಿದು ಕುಪ್ಪಳಿಸಿದರು.

ಇದನ್ನು ಓದಿ:ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳದ ಮೇಲೆ ಅಂಟಿದ ಕಳಂಕ ದೂರ: ಶಾಸಕ ಹರೀಶ್‌ ಗೌಡ

ಹಣ, ಮದ್ಯದೊಳ
ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧನೆ ನಡೆಸುತ್ತಿರುವ ಅಭ್ಯರ್ಥಿಗಳಾದ ವಿವಿಯ ಸಂಶೋಧಕರ ಸಂಘ ಚುನಾವಣೆ ಆದರೂ ಹಣ, ಮದ್ಯದ ಹೊಳೆಯೂ ಹರಿದಿದೆ.

ಈಗಾಗಲೇ ದಲಿತ, ರೈತ, ಕಮ್ಯುನಿಸ್ಟ್ ಪಕ್ಷದ ಜನಪರ ಚಳವಳಿಗಳಲ್ಲಿ ಗುರುತಿಸಿಕೊಂಡಿರುವ ವರಹಳ್ಳಿ ಆನಂದ ‘ಬಂಗಾರಿ’ ಕಾದಂಬರಿಯ ಮೂಲಕ ಯುವ ಸಾಹಿತಿಯಾಗಿ ಪರಿಚಿತರಾಗಿದ್ದಾರೆ. ಪಿಎಚ್.ಡಿ ವಿದ್ಯಾರ್ಥಿಗಳಿಗೆ ಗೈಡ್‌ಗಳ ಕೊರತೆ ನೀಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಗೆ ತೆರಳಿ ಮನವಿ ಕೊಟ್ಟು ಹೋರಾಟ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

11 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

11 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

11 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

11 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

11 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

11 hours ago