ಮೈಸೂರು: ಮುಡಾ ಪ್ರಕರಣದಲ್ಲಿ ಎ4 ಆರೋಪಿಯಾಗಿರುವ ದೇವರಾಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಎರಡನೇ ಬಾರಿಗೆ ನೋಟಿಸ್ ನೀಡಿದ್ದಾರೆ.
ಈಗಾಗಲೇ ಎ4 ಆರೋಪಿಯಾಗಿರುವ ದೇವರಾಜು ಅವರನ್ನು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರ ನೇತೃತ್ವದ ತನಿಖಾ ತಂಡ ವಿಚಾರಣೆ ನಡೆಸಿದ್ದು, ಇದೀಗ ಮತ್ತೊಮ್ಮೆ ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಶೇಷ ಜನ ಪ್ರತಿನಿಧಿಗಳ ಕೋರ್ಟ್ ಆದೇಶದ ಮೇರೆಗೆ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ಅನ್ವಯ ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಕುಮಾರ್ ಅವರ ನೇತೃತ್ವದ ತನಿಖಾ ತಂಡವೂ ಸಂಬಂಧಪಟ್ಟ ಆರೋಪಿಗಳನ್ನು ವಿಚಾರಣೆ ನಡೆಸಿತ್ತು. ಆದರೆ ಈಗ ಮತ್ತೊಮ್ಮೆ ಅಧಿಕ ಮಾಹಿತಿಗಾಗಿ ಲೋಕಾಯುಕ್ತ ಅಧಿಕಾರಿಗಳು ಸರ್ವೆ ನಂಬರ್.464ರ ನಿವೇಶನ ಮಾಲೀಕರಾಗಿರುವ ದೇವರಾಜುಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…