Siddaramaiah. Photo: PTI
ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈಸೂರು ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ.
ಮುಡಾ ಹಗರಣ ಸಂಬಂಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.
ಮೈಸೂರು ಮುಡಾ ಹಗರಣ ಸಂಬಂಧ ವರದಿ ಸಲ್ಲಿಸಲು ನ್ಯಾಯಾಲಯ ಜನವರಿ.27ರ ಗಡುವು ನೀಡಿತ್ತು. ಆದರೆ ಜನವರಿ.27ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಗೂ ಮುನ್ನ ಇಂದು ವರದಿಯನ್ನು ಸಲ್ಲಿಸಲಾಗಿದೆ.
ಇನ್ನು ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿ ಅಂತಿಮ ವರದಿಯಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಇನ್ನೂ ಹೆಚ್ಚಿನ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ಕೋರಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮೂಲಗಳ ಪ್ರಕಾರ ಈ ವರದಿಯನ್ನು ಲೋಕಾಯುಕ್ತ ಪೊಲೀಸರ ನೇತೃತ್ವದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಎಡಿಜಿಪಿ ಮನೀಶ್ ಖಾರ್ಬಿಕರ್ ಹಾಗೂ ಐಜಿಪಿ ಸುಬ್ರಹ್ಮಣ್ಯರಾವ್ ಅವರು ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…