M G Mahesh Reaction On KPCC spokesperson M Lakshman Statement
ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ಗೆ ಐದು ಬಾರಿ ಚುನಾವಣೆಯಲ್ಲಿ ಸೋತು ತಲೆಕೆಟ್ಟಿದ್ದು, ಹುಚ್ಚು ಹಿಡಿದಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಕಿಡಿಕಾರಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಗೆ ಆಂತರಿಕ ಭದ್ರತಾ ವೈಫಲ್ಯ ಕಾರಣ. ಇದಕ್ಕೆ ಕೇಂದ್ರ ಬಿಜೆಪಿಯೂ ಕಾರಣ. ಈ ಹಿನ್ನೆಲೆಯಲ್ಲಿ ಘಟನೆಯ ನೈತಿಕ ಹೊಣೆ ಹೊತ್ತು ಬಿಜೆಪಿ ನಾಯಕರು ರಾಜೀನಾಮೆ ನೀಡಿ ಹೊರ ಬರಬೇಕು ಎಂದು ಹೊರಬೇಕು ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಅವರು, ಲಕ್ಷ್ಮಣ್ ಚುನಾವಣೆಗಳಲ್ಲಿ ಐದಾರು ಬಾರಿ ಸೋತು ಹುಚ್ಚನಂತೆ ಮಾತಾಡುತ್ತಾನೆ. ಆತನ ಮೇಲೆ ದೇಶ ದ್ರೋಹದ ಕೇಸ್ ದಾಖಲು ಮಾಡುತ್ತೇವೆ. ದೇಶ ಉಗ್ರರ ದಾಳಿಯಿಂದ ದುಃಖದಲ್ಲಿರುವಾಗ ಈ ರೀತಿ ಹುಚ್ಚನಂತೆ ಹೇಳಿಕೆ ಕೊಡುವುದು ಖಂಡನೀಯ. ಈ ಕೂಡಲೇ ಪೋಲಿಸರು ಅವನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಇನ್ನು ದೇಶ ಒಂದು ಕಡೆ ಪಾಕಿಸ್ತಾನದ ಮೇಲೆ ಪ್ರತಿಕಾರ ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಪಾಪಿಗಳನ್ನು ಬಿಡಬಾರದು. ಅವರಿಗೆ ಪ್ರಧಾನಿ ಮೋದಿ ಜೀ ತಕ್ಕ ಪಾಠ ಕಲಿಸುತ್ತಾರೆ. ಈ ಮೂಲಕ ಪ್ರತಿಕಾರ ತೀರಿಸಿಕೊಳ್ಳುತ್ತಾರೆ. ಈಗಾಗಲೇ ರಾಜತಾಂತ್ರಿಕ ವ್ಯವಸ್ಥೆ ಮೂಲಕ ಪಾಕಿಸ್ತಾನಕ್ಕೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ ಎಲ್ಲಾ ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡುವ ನಿರ್ಧಾರವನ್ನ ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಇದು ಸ್ವಾಗತಾರ್ಹ ವಿಷಯ ಎಂದರು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…