ಮೈಸೂರು ನಗರ

ಲಕ್ಷ್ಮಣ್‌ಗೆ 5 ಬಾರಿ ಸೋತು ತಲೆಕೆಟ್ಟಿದೆ, ಹುಚ್ಚು ಹಿಡಿದಿದೆ: ಎಂ.ಜಿ.ಮಹೇಶ್ ಆಕ್ರೋಶ

ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಐದು ಬಾರಿ ಚುನಾವಣೆಯಲ್ಲಿ ಸೋತು ತಲೆಕೆಟ್ಟಿದ್ದು, ಹುಚ್ಚು ಹಿಡಿದಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಕಿಡಿಕಾರಿದ್ದಾರೆ.

ಪಹಲ್ಗಾಮ್ ಉಗ್ರರ ದಾಳಿಗೆ ಆಂತರಿಕ ಭದ್ರತಾ ವೈಫಲ್ಯ ಕಾರಣ. ಇದಕ್ಕೆ ಕೇಂದ್ರ ಬಿಜೆಪಿಯೂ ಕಾರಣ. ಈ ಹಿನ್ನೆಲೆಯಲ್ಲಿ ಘಟನೆಯ ನೈತಿಕ ಹೊಣೆ ಹೊತ್ತು ಬಿಜೆಪಿ ನಾಯಕರು ರಾಜೀನಾಮೆ ನೀಡಿ ಹೊರ ಬರಬೇಕು ಎಂದು ಹೊರಬೇಕು ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಅವರು, ಲಕ್ಷ್ಮಣ್ ಚುನಾವಣೆಗಳಲ್ಲಿ ಐದಾರು ಬಾರಿ ಸೋತು ಹುಚ್ಚನಂತೆ ಮಾತಾಡುತ್ತಾನೆ. ಆತನ‌ ಮೇಲೆ ದೇಶ ದ್ರೋಹದ ಕೇಸ್ ದಾಖಲು ಮಾಡುತ್ತೇವೆ. ದೇಶ ಉಗ್ರರ ದಾಳಿಯಿಂದ ದುಃಖದಲ್ಲಿರುವಾಗ ಈ ರೀತಿ ಹುಚ್ಚನಂತೆ ಹೇಳಿಕೆ ಕೊಡುವುದು ಖಂಡನೀಯ. ಈ ಕೂಡಲೇ ಪೋಲಿಸರು ಅವನ‌ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ದೇಶ ಒಂದು ಕಡೆ ಪಾಕಿಸ್ತಾನದ ಮೇಲೆ ಪ್ರತಿಕಾರ ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಪಾಪಿಗಳನ್ನು ಬಿಡಬಾರದು. ಅವರಿಗೆ ಪ್ರಧಾನಿ ಮೋದಿ ಜೀ ತಕ್ಕ ಪಾಠ ಕಲಿಸುತ್ತಾರೆ. ಈ ಮೂಲಕ ಪ್ರತಿಕಾರ ತೀರಿಸಿಕೊಳ್ಳುತ್ತಾರೆ. ಈಗಾಗಲೇ ರಾಜತಾಂತ್ರಿಕ ವ್ಯವಸ್ಥೆ ಮೂಲಕ ಪಾಕಿಸ್ತಾನಕ್ಕೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ ಎಲ್ಲಾ ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡುವ ನಿರ್ಧಾರವನ್ನ ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಇದು ಸ್ವಾಗತಾರ್ಹ ವಿಷಯ ಎಂದರು.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

7 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

9 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

11 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

11 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

12 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

12 hours ago