ಮೈಸೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನೂರು ಬಾರಿ ಸುಳ್ಳನ್ನು ಹೇಳಿ ಸತ್ಯವನ್ನಾಗಿಸಲು ಹೊರಟಿದ್ದಾರೆ. ಹೀಗಾಗಿ ವಿಪಕ್ಷ ನಾಯಕನಿಗೆ ಸುಳ್ಳು ಹೇಳುವುದರಲ್ಲಿ ಪಿಎಚ್ಡಿ ಪದವಿ ಕೊಡಬೇಕು ಎಂದು ಆರ್.ಅಶೋಕ್ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ನ.21) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಅಶೋಕ್ ಅವರು ವಿರೋಧ ಪಕ್ಷಕ್ಕೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡುವ ವ್ಯಕ್ತಿಯಾಗಿದ್ದು, ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಂದಾಜು 12, 80, 540 ಹೆಚ್ಚುವರಿ ಬಿಪಿಎಲ್ ಕಾರ್ಡ್ಗಳು ಹೆಚ್ಚುವರಿಯಾಗಿವೆ ಎಂದು ಮಾಹಿತಿ ಲಭ್ಯವಾಗಿದ್ದು, ರಾಷ್ಟ್ರೀಯ ಆಹಾರ ಇಲಾಖೆಯಿಂದ ಸರ್ಕಾರಕ್ಕೆ ನೋಟಿಸ್ ಬಂದಿದೆ. ಹೀಗಾಗಿ ಸರ್ಕಾರ ಕ್ರಮ ಕೈಗೊಂಡಿದೆಯಷ್ಟೇ. ಈ ಬಗ್ಗೆ ಬಿಜೆಪಿಯವರು ಸುಮ್ಮನೆ ಸುಳ್ಳು ಹೇಳುತ್ತಾರೆ. ಏಕೆಂದರೆ ಅವರದ್ದು ಡಬಲ್ ಸ್ಟ್ಯಾಂಡರ್ಡ್ ಸರ್ಕಾರವಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ.
ನಮ್ಮ ಸರ್ಕಾರ ಒಂದು ಬಿಪಿಎಲ್ ಕಾರ್ಡ್ನ್ನು ರದ್ದು ಮಾಡಿಲ್ಲ. ಆದರೆ ಆ ಕಾರ್ಡ್ಗಳನ್ನು ಎಪಿಎಲ್ಗೆ ಬದಲಾಯಿಸಿದ್ದೇವೆ. ಬಿಪಿಎಲ್ ಕಾರ್ಡ್ ರದ್ದಾದರೆ ಅಕ್ಕಿ ಮಾತ್ರ ಸಿಗುವುದಿಲ್ಲ. ಆದರೆ ಬಿಪಿಎಲ್ ಕಾರ್ಡ್ನಿಂದ ಪಡೆದಿರುವ ಗೃಹಲಕ್ಷ್ಮೀ ನಿಲ್ಲುವುದಿಲ್ಲ. ಅದರಲ್ಲಿ ತೆರಿಗೆ ಪಾವತಿ ಮಾಡುವಂತಹ ಮಹಿಳೆಯರಿದ್ದರೆ ಮಾತ್ರ ಗೃಹಲಕ್ಷ್ಮೀ ಸಿಗುವುದಿಲ್ಲ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ನೋಟಿಸ್ ನೀಡಿ ಇವಾಗ ನಾಟಕವಾಡುತ್ತಿದ್ದೀರಾ? ನಿಮಗೆ ನಾಚಿಕೆ ಆಗೋದಿಲ್ಲವಾ ಎಂದು ವಾಗ್ದಾಳಿ ನಡೆಸಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…