ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಸುಳ್ಳು ಹೇಳುವ ವಿಪಕ್ಷ ನಾಯಕ ಆರ್‌.ಅಶೋಕ್‌ಗೆ ಪಿಎಚ್‌ಡಿ ಕೊಡಬೇಕು: ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌

ಮೈಸೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ನೂರು ಬಾರಿ ಸುಳ್ಳನ್ನು ಹೇಳಿ ಸತ್ಯವನ್ನಾಗಿಸಲು ಹೊರಟಿದ್ದಾರೆ. ಹೀಗಾಗಿ ವಿಪಕ್ಷ ನಾಯಕನಿಗೆ ಸುಳ್ಳು ಹೇಳುವುದರಲ್ಲಿ ಪಿಎಚ್‌ಡಿ ಪದವಿ ಕೊಡಬೇಕು ಎಂದು ಆರ್‌.ಅಶೋಕ್‌  ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ನ.21) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಅಶೋಕ್‌ ಅವರು ವಿರೋಧ ಪಕ್ಷಕ್ಕೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡುವ ವ್ಯಕ್ತಿಯಾಗಿದ್ದು, ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಂದಾಜು 12, 80, 540 ಹೆಚ್ಚುವರಿ ಬಿಪಿಎಲ್‌ ಕಾರ್ಡ್‌ಗಳು ಹೆಚ್ಚುವರಿಯಾಗಿವೆ ಎಂದು ಮಾಹಿತಿ ಲಭ್ಯವಾಗಿದ್ದು, ರಾಷ್ಟ್ರೀಯ ಆಹಾರ ಇಲಾಖೆಯಿಂದ ಸರ್ಕಾರಕ್ಕೆ ನೋಟಿಸ್‌ ಬಂದಿದೆ. ಹೀಗಾಗಿ ಸರ್ಕಾರ ಕ್ರಮ ಕೈಗೊಂಡಿದೆಯಷ್ಟೇ. ಈ ಬಗ್ಗೆ ಬಿಜೆಪಿಯವರು ಸುಮ್ಮನೆ ಸುಳ್ಳು ಹೇಳುತ್ತಾರೆ. ಏಕೆಂದರೆ ಅವರದ್ದು ಡಬಲ್‌ ಸ್ಟ್ಯಾಂಡರ್ಡ್‌ ಸರ್ಕಾರವಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ.

ನಮ್ಮ ಸರ್ಕಾರ ಒಂದು ಬಿಪಿಎಲ್‌ ಕಾರ್ಡ್‌ನ್ನು ರದ್ದು ಮಾಡಿಲ್ಲ. ಆದರೆ ಆ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾಯಿಸಿದ್ದೇವೆ. ಬಿಪಿಎಲ್‌ ಕಾರ್ಡ್‌ ರದ್ದಾದರೆ ಅಕ್ಕಿ ಮಾತ್ರ ಸಿಗುವುದಿಲ್ಲ. ಆದರೆ ಬಿಪಿಎಲ್‌ ಕಾರ್ಡ್‌ನಿಂದ ಪಡೆದಿರುವ ಗೃಹಲಕ್ಷ್ಮೀ ನಿಲ್ಲುವುದಿಲ್ಲ. ಅದರಲ್ಲಿ ತೆರಿಗೆ ಪಾವತಿ ಮಾಡುವಂತಹ ಮಹಿಳೆಯರಿದ್ದರೆ ಮಾತ್ರ ಗೃಹಲಕ್ಷ್ಮೀ ಸಿಗುವುದಿಲ್ಲ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ನೋಟಿಸ್‌ ನೀಡಿ ಇವಾಗ ನಾಟಕವಾಡುತ್ತಿದ್ದೀರಾ? ನಿಮಗೆ ನಾಚಿಕೆ ಆಗೋದಿಲ್ಲವಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

7 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

7 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

7 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

7 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

10 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

10 hours ago