ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಸುಳ್ಳು ಹೇಳುವ ವಿಪಕ್ಷ ನಾಯಕ ಆರ್‌.ಅಶೋಕ್‌ಗೆ ಪಿಎಚ್‌ಡಿ ಕೊಡಬೇಕು: ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌

ಮೈಸೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ನೂರು ಬಾರಿ ಸುಳ್ಳನ್ನು ಹೇಳಿ ಸತ್ಯವನ್ನಾಗಿಸಲು ಹೊರಟಿದ್ದಾರೆ. ಹೀಗಾಗಿ ವಿಪಕ್ಷ ನಾಯಕನಿಗೆ ಸುಳ್ಳು ಹೇಳುವುದರಲ್ಲಿ ಪಿಎಚ್‌ಡಿ ಪದವಿ ಕೊಡಬೇಕು ಎಂದು ಆರ್‌.ಅಶೋಕ್‌  ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ನ.21) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಅಶೋಕ್‌ ಅವರು ವಿರೋಧ ಪಕ್ಷಕ್ಕೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡುವ ವ್ಯಕ್ತಿಯಾಗಿದ್ದು, ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಂದಾಜು 12, 80, 540 ಹೆಚ್ಚುವರಿ ಬಿಪಿಎಲ್‌ ಕಾರ್ಡ್‌ಗಳು ಹೆಚ್ಚುವರಿಯಾಗಿವೆ ಎಂದು ಮಾಹಿತಿ ಲಭ್ಯವಾಗಿದ್ದು, ರಾಷ್ಟ್ರೀಯ ಆಹಾರ ಇಲಾಖೆಯಿಂದ ಸರ್ಕಾರಕ್ಕೆ ನೋಟಿಸ್‌ ಬಂದಿದೆ. ಹೀಗಾಗಿ ಸರ್ಕಾರ ಕ್ರಮ ಕೈಗೊಂಡಿದೆಯಷ್ಟೇ. ಈ ಬಗ್ಗೆ ಬಿಜೆಪಿಯವರು ಸುಮ್ಮನೆ ಸುಳ್ಳು ಹೇಳುತ್ತಾರೆ. ಏಕೆಂದರೆ ಅವರದ್ದು ಡಬಲ್‌ ಸ್ಟ್ಯಾಂಡರ್ಡ್‌ ಸರ್ಕಾರವಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ.

ನಮ್ಮ ಸರ್ಕಾರ ಒಂದು ಬಿಪಿಎಲ್‌ ಕಾರ್ಡ್‌ನ್ನು ರದ್ದು ಮಾಡಿಲ್ಲ. ಆದರೆ ಆ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾಯಿಸಿದ್ದೇವೆ. ಬಿಪಿಎಲ್‌ ಕಾರ್ಡ್‌ ರದ್ದಾದರೆ ಅಕ್ಕಿ ಮಾತ್ರ ಸಿಗುವುದಿಲ್ಲ. ಆದರೆ ಬಿಪಿಎಲ್‌ ಕಾರ್ಡ್‌ನಿಂದ ಪಡೆದಿರುವ ಗೃಹಲಕ್ಷ್ಮೀ ನಿಲ್ಲುವುದಿಲ್ಲ. ಅದರಲ್ಲಿ ತೆರಿಗೆ ಪಾವತಿ ಮಾಡುವಂತಹ ಮಹಿಳೆಯರಿದ್ದರೆ ಮಾತ್ರ ಗೃಹಲಕ್ಷ್ಮೀ ಸಿಗುವುದಿಲ್ಲ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ನೋಟಿಸ್‌ ನೀಡಿ ಇವಾಗ ನಾಟಕವಾಡುತ್ತಿದ್ದೀರಾ? ನಿಮಗೆ ನಾಚಿಕೆ ಆಗೋದಿಲ್ಲವಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

12 hours ago