ಮೈಸೂರು ನಗರ

ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ನಾಮಕರಣವಾಗಿದ್ದರೇ ಸಂಸದ ಯದುವೀರ್‌ ದಾಖಲೆ ನೀಡಲಿ: ಎಂ.ಲಕ್ಷ್ಮಣ್‌

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ನಾಮಕರಣ ಮಾಡಿರುವುದಕ್ಕೆ ಸಂಸದ ಯದುವೀರ್‌ ದಾಖಲೆಗಳಿದ್ದರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಜನವರಿ.1) ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಮಾರ್ಗ ಎಂಬ ಹೆಸರಿಡುವುದಕ್ಕೆ ಬಿಜೆಪಿಯವರು ವಿರೋಧ ವ್ಯಕ್ಯಪಡಿಸುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಹೆಸರು ಕೇಳಿದರೆ ಕೆಲವರು ಮೈಮೇಲೆ ಮಲ ಸುರಿದುಕೊಂಡಂವರಂತೆ ಆಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ವಾಸ್ತವ ತಿಳಿದುಕೊಳ್ಳಲೆಂದು ಮಂಗಳವಾರ(ಡಿ.31) ತಮ್ಮ ನೇತೃತ್ವದ ಕಾಂಗ್ರೆಸ್‌ ನಿಯೋಗವು ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ಮಾಹಿತಿ ಪಡೆಯಲಾಗಿತ್ತು. ಆ ವೇಳೆ ನಗರ ಪಾಲಿಕೆ ಆಯುಕ್ತರು ಆ ರಸ್ತೆಗೆ ಪ್ರಿನ್ಸೆಸ್‌ ರಸ್ತೆ ಎಂಬ ಹೆಸರಿಟ್ಟಿರುವ ಬಗ್ಗೆ ನಾವು ಪರಿಶೀಲನೆ ನಡೆಸಿರುವ ದಾಖಲೆಗಳಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಕಾನೂನಾತ್ಮಕವಾಗಿ ನಾಮಕರಣ ಪ್ರಕ್ರಿಯೆ ನಡೆಸಬೇಕು ಎಂದು ನಾವು ಮನವಿ ಮಾಡಿದ್ದು, ಆ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರಿಡುವ ವಿಚಾರದಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಸಂಸದ ಯದುವೀರ್‌ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಆಕ್ಷೇಪ ಮಾಡುತ್ತಿರುವ ಬಗ್ಗೆ ಮಾತನಾಡಿದ ಅವರು,ಆ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ನಾಮಕರಣ ಮಾಡಿರುವುದಕ್ಕೆ ದಾಖಲೆಗಳಿದ್ದರೆ ನೀಡಲಿ. ಆ ರಸ್ತೆಯೂ ನಗರದಿಂದ ಕೆಆರ್‌ಎಸ್‌ಗೆ ಸಂಪರ್ಕಿಸುವ ರಸ್ತೆಯಾಗಿರುವುದರಿಂದ ಅದನ್ನು ಸಾರ್ವಜನಿಕರು ಕೆಆರ್‌ಎಸ್‌ ರಸ್ತೆ ಎಂದು ಕರೆಯುತ್ತಾರೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಮೈಸೂರಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಈ ಕಾರಣಕ್ಕೆ ಅವರ ಕೊಡುಗೆಯನ್ನು ಪರಿಗಣಿಸಿ ಆ ರಸ್ತೆಗೆ ಅವರ ಹೆಸರನ್ನು ನಾಮಕರಣ ಮಾಡುವಂತೆ ಸಾರ್ವಜನಿಕರ ಒತ್ತಾಯವಿತ್ತು. ಹಾಗಾಗಿ ನಗರ ಪಾಲಿಕೆಯೂ ಕ್ರಮ ಕೈಗೊಂಡಿದೆ ಎಂದಿದ್ದಾರೆ.

ನಾವು ಮಹಾರಾಜರ ವಿರುದ್ಧ ಇದ್ದೇವೆ ಎಂದು ಬಿಂಬಿಸುವುದು ತಪ್ಪು. ಅಸಲಿ ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರಿಗೆ ನಮ್ಮ ಪಕ್ಷದಿಂದ ಚುನಾವಣೆಯಲ್ಲಿ ಟಿಕೆಟ್‌ ನೀಡಿ ಗೆಲ್ಲಿಸಿದ್ದೇವು.  ಯದುವೀರ್‌ ಅವರನ್ನು ರಾಜ ಮನೆತನದಿಂದ ದತ್ತು ಪಡೆಯಲಾಗಿದೆ.  ಅವರು  ವರ್ಜಿನಲ್‌ ರಾಜವಂಶಸ್ಥರಲ್ಲ. ಹೀಗಾಗಿ ಅವರು ಅಭಿವೃದ್ಧಿ ಕಾರ್ಯಗಳ ಬಗ್ಗೆ ಆದ್ಯತೆ ನೀಡಲಿ  ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

3 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

3 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

3 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

3 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

3 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

4 hours ago