ಮೈಸೂರು ನಗರ

ಪ್ರತಾಪ್‌ ಸಿಂಹಗೆ ಅಭಿನಂದನೆ ಸಲ್ಲಿಸಿದ ಎಂ.ಲಕ್ಷ್ಮಣ್‌

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡಿರುವುದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಬೆಂಬಲ ಸೂಚಿಸಿರುವುದಕ್ಕೆ, ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಡಿಸೆಂಬರ್.26)‌ ಕಾಂಗ್ರೆಸ್‌ ಕಚೇರಿಯಲ್ಲಿ ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ(ಡಿ.25) ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡಬಹುದು ಎಂದು ಬೆಂಬಲ ಸೂಚಿಸಿರುವುದಕ್ಕೆ ನಾನು ಅಭಿನಂದಿಸುತ್ತೇನೆ. ಪ್ರತಾಪ್‌ ಸಿಂಹ ಬಲಪಂಥೀಯವಾಗಿದ್ದು, ಹತ್ತು ವರ್ಷಗಳ ನಂತರ ಸತ್ಯ ಹೇಳಿದ್ದಾರೆ. ಹೀಗಾಗಿ ಅವರು ಎಲ್ಲಾದರೂ ಸಿಕ್ಕಿದರೆ ನಾನು ಅವರಿಗೆ ಕಾಫಿ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರತಾಪ್‌ ಸಿಂಗಹ ಅವರಿಗೆ ಟಿಕೆಟ್‌ ತಪ್ಪಿದ ಮೇಲೆ ಜ್ಞಾನೋದಯವಾಗಿದೆ. ಈಗಲಾದರೂ ಬಿಜೆಪಿಯ ಹಿಡನ್‌ ಅಜೆಂಡಾ ಗೊತ್ತಾಗಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆಯೇ ಹೊರತು ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಕ್ಕೆ ಅಲ್ಲ. ಬಿಜೆಪಿಯವರು 5 ವರ್ಷ ಅಧಿಕಾರದಲ್ಲಿದ್ದರು ಮೈಸೂರಿಗೆ ಏನು ಕೋಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ ದೇಶಾದ್ಯಾಂತ ಚರ್ಚೆಯಾಗುತ್ತಿದೆ ಎಂದರೆ ಅದು ಈ ವ್ಯವಸ್ಥೆಯ ದುರ್ದೈವ. ಶಾಸಕ ಕೆ.ಹರೀಶ್‌ ಗೌಡ ಜಿಲ್ಲಾಧಿಕಾರಿ ಕಚೇರಿಗೆ 2.1 ಕಿಲೋ ಮೀಟರ್‌ ರಸ್ತೆ ನಾಮಕರಣಕ್ಕೆ ಪ್ರಸ್ತಾವನೆ ಸಲ್ಲಿಯಾಗುವಂತೆ ಪತ್ರ ಬರೆದಿದ್ದಾರೆ. ಅಲ್ಲದೇ ಕ್ಷೇತ್ರದ ಜನ ಸಾಮಾನ್ಯರಿಂದ ರಸ್ತೆ ನಾಮಕರಣ ವಿಚಾರವಾಗಿ ಮನವಿ ಹೋಗಿದೆ. ಜೊತೆಗೆ ಈ ರಸ್ತೆಯಲ್ಲಿ 10 ಆಸ್ಪತ್ರೆಗಳು ನಿರ್ಮಾಣವಾಗಿವೆ. ಅದಕ್ಕೆ ಸುಮಾರು 1,569 ಕೋಟಿ ರೂಪಾಯಿಗಳನ್ನು ಸಿಎಂ ಸಿದ್ದರಾಮಯ್ಯ ಅವರೇ ಬಿಡುಗಡೆ ಮಾಡಿದ್ದು, ಜಯದೇವ ಆಸ್ಪತ್ರೆ, ಸೂಪರ್‌ ಸ್ಪೆಷಾಲಿಟಿ ಜಿಲ್ಲಾ ಆಸ್ಪತ್ರೆ, ಹೈಟೆಕ್‌ ಪಂಚಕರ್ಮ ಆಸ್ಪತ್ರೆ, ಚರಕ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳು ಸ್ಥಾಪನೆಯಾಗಿವೆ. ಹೀಗಾಗಿ ಸಿದ್ದರಾಮಯ್ಯ ಹೆಸರು ಇತಿಹಾಸ ಪುಟ್ಟದಲ್ಲಿ ಇರಬೇಕೆಂದು ನಮ್ಮ ಮನವಿಯಾಗಿದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

1 hour ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

1 hour ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

1 hour ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

1 hour ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

1 hour ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

2 hours ago