ಮೈಸೂರು: ನಗರದ ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡಿರುವುದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲ ಸೂಚಿಸಿರುವುದಕ್ಕೆ, ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.
ನಗರದಲ್ಲಿ ಇಂದು(ಡಿಸೆಂಬರ್.26) ಕಾಂಗ್ರೆಸ್ ಕಚೇರಿಯಲ್ಲಿ ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ(ಡಿ.25) ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡಬಹುದು ಎಂದು ಬೆಂಬಲ ಸೂಚಿಸಿರುವುದಕ್ಕೆ ನಾನು ಅಭಿನಂದಿಸುತ್ತೇನೆ. ಪ್ರತಾಪ್ ಸಿಂಹ ಬಲಪಂಥೀಯವಾಗಿದ್ದು, ಹತ್ತು ವರ್ಷಗಳ ನಂತರ ಸತ್ಯ ಹೇಳಿದ್ದಾರೆ. ಹೀಗಾಗಿ ಅವರು ಎಲ್ಲಾದರೂ ಸಿಕ್ಕಿದರೆ ನಾನು ಅವರಿಗೆ ಕಾಫಿ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರತಾಪ್ ಸಿಂಗಹ ಅವರಿಗೆ ಟಿಕೆಟ್ ತಪ್ಪಿದ ಮೇಲೆ ಜ್ಞಾನೋದಯವಾಗಿದೆ. ಈಗಲಾದರೂ ಬಿಜೆಪಿಯ ಹಿಡನ್ ಅಜೆಂಡಾ ಗೊತ್ತಾಗಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆಯೇ ಹೊರತು ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಕ್ಕೆ ಅಲ್ಲ. ಬಿಜೆಪಿಯವರು 5 ವರ್ಷ ಅಧಿಕಾರದಲ್ಲಿದ್ದರು ಮೈಸೂರಿಗೆ ಏನು ಕೋಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ ದೇಶಾದ್ಯಾಂತ ಚರ್ಚೆಯಾಗುತ್ತಿದೆ ಎಂದರೆ ಅದು ಈ ವ್ಯವಸ್ಥೆಯ ದುರ್ದೈವ. ಶಾಸಕ ಕೆ.ಹರೀಶ್ ಗೌಡ ಜಿಲ್ಲಾಧಿಕಾರಿ ಕಚೇರಿಗೆ 2.1 ಕಿಲೋ ಮೀಟರ್ ರಸ್ತೆ ನಾಮಕರಣಕ್ಕೆ ಪ್ರಸ್ತಾವನೆ ಸಲ್ಲಿಯಾಗುವಂತೆ ಪತ್ರ ಬರೆದಿದ್ದಾರೆ. ಅಲ್ಲದೇ ಕ್ಷೇತ್ರದ ಜನ ಸಾಮಾನ್ಯರಿಂದ ರಸ್ತೆ ನಾಮಕರಣ ವಿಚಾರವಾಗಿ ಮನವಿ ಹೋಗಿದೆ. ಜೊತೆಗೆ ಈ ರಸ್ತೆಯಲ್ಲಿ 10 ಆಸ್ಪತ್ರೆಗಳು ನಿರ್ಮಾಣವಾಗಿವೆ. ಅದಕ್ಕೆ ಸುಮಾರು 1,569 ಕೋಟಿ ರೂಪಾಯಿಗಳನ್ನು ಸಿಎಂ ಸಿದ್ದರಾಮಯ್ಯ ಅವರೇ ಬಿಡುಗಡೆ ಮಾಡಿದ್ದು, ಜಯದೇವ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಜಿಲ್ಲಾ ಆಸ್ಪತ್ರೆ, ಹೈಟೆಕ್ ಪಂಚಕರ್ಮ ಆಸ್ಪತ್ರೆ, ಚರಕ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳು ಸ್ಥಾಪನೆಯಾಗಿವೆ. ಹೀಗಾಗಿ ಸಿದ್ದರಾಮಯ್ಯ ಹೆಸರು ಇತಿಹಾಸ ಪುಟ್ಟದಲ್ಲಿ ಇರಬೇಕೆಂದು ನಮ್ಮ ಮನವಿಯಾಗಿದೆ ಎಂದಿದ್ದಾರೆ.
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…
ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…