ಮೈಸೂರು ನಗರ

ಪ್ರತಾಪ್‌ ಸಿಂಹಗೆ ಅಭಿನಂದನೆ ಸಲ್ಲಿಸಿದ ಎಂ.ಲಕ್ಷ್ಮಣ್‌

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡಿರುವುದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಬೆಂಬಲ ಸೂಚಿಸಿರುವುದಕ್ಕೆ, ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಡಿಸೆಂಬರ್.26)‌ ಕಾಂಗ್ರೆಸ್‌ ಕಚೇರಿಯಲ್ಲಿ ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ(ಡಿ.25) ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡಬಹುದು ಎಂದು ಬೆಂಬಲ ಸೂಚಿಸಿರುವುದಕ್ಕೆ ನಾನು ಅಭಿನಂದಿಸುತ್ತೇನೆ. ಪ್ರತಾಪ್‌ ಸಿಂಹ ಬಲಪಂಥೀಯವಾಗಿದ್ದು, ಹತ್ತು ವರ್ಷಗಳ ನಂತರ ಸತ್ಯ ಹೇಳಿದ್ದಾರೆ. ಹೀಗಾಗಿ ಅವರು ಎಲ್ಲಾದರೂ ಸಿಕ್ಕಿದರೆ ನಾನು ಅವರಿಗೆ ಕಾಫಿ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರತಾಪ್‌ ಸಿಂಗಹ ಅವರಿಗೆ ಟಿಕೆಟ್‌ ತಪ್ಪಿದ ಮೇಲೆ ಜ್ಞಾನೋದಯವಾಗಿದೆ. ಈಗಲಾದರೂ ಬಿಜೆಪಿಯ ಹಿಡನ್‌ ಅಜೆಂಡಾ ಗೊತ್ತಾಗಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆಯೇ ಹೊರತು ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಕ್ಕೆ ಅಲ್ಲ. ಬಿಜೆಪಿಯವರು 5 ವರ್ಷ ಅಧಿಕಾರದಲ್ಲಿದ್ದರು ಮೈಸೂರಿಗೆ ಏನು ಕೋಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ ದೇಶಾದ್ಯಾಂತ ಚರ್ಚೆಯಾಗುತ್ತಿದೆ ಎಂದರೆ ಅದು ಈ ವ್ಯವಸ್ಥೆಯ ದುರ್ದೈವ. ಶಾಸಕ ಕೆ.ಹರೀಶ್‌ ಗೌಡ ಜಿಲ್ಲಾಧಿಕಾರಿ ಕಚೇರಿಗೆ 2.1 ಕಿಲೋ ಮೀಟರ್‌ ರಸ್ತೆ ನಾಮಕರಣಕ್ಕೆ ಪ್ರಸ್ತಾವನೆ ಸಲ್ಲಿಯಾಗುವಂತೆ ಪತ್ರ ಬರೆದಿದ್ದಾರೆ. ಅಲ್ಲದೇ ಕ್ಷೇತ್ರದ ಜನ ಸಾಮಾನ್ಯರಿಂದ ರಸ್ತೆ ನಾಮಕರಣ ವಿಚಾರವಾಗಿ ಮನವಿ ಹೋಗಿದೆ. ಜೊತೆಗೆ ಈ ರಸ್ತೆಯಲ್ಲಿ 10 ಆಸ್ಪತ್ರೆಗಳು ನಿರ್ಮಾಣವಾಗಿವೆ. ಅದಕ್ಕೆ ಸುಮಾರು 1,569 ಕೋಟಿ ರೂಪಾಯಿಗಳನ್ನು ಸಿಎಂ ಸಿದ್ದರಾಮಯ್ಯ ಅವರೇ ಬಿಡುಗಡೆ ಮಾಡಿದ್ದು, ಜಯದೇವ ಆಸ್ಪತ್ರೆ, ಸೂಪರ್‌ ಸ್ಪೆಷಾಲಿಟಿ ಜಿಲ್ಲಾ ಆಸ್ಪತ್ರೆ, ಹೈಟೆಕ್‌ ಪಂಚಕರ್ಮ ಆಸ್ಪತ್ರೆ, ಚರಕ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳು ಸ್ಥಾಪನೆಯಾಗಿವೆ. ಹೀಗಾಗಿ ಸಿದ್ದರಾಮಯ್ಯ ಹೆಸರು ಇತಿಹಾಸ ಪುಟ್ಟದಲ್ಲಿ ಇರಬೇಕೆಂದು ನಮ್ಮ ಮನವಿಯಾಗಿದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

3 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

4 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

4 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

4 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

4 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

5 hours ago