ಮೈಸೂರು ನಗರ

ಪ್ರತಾಪ್‌ ಸಿಂಹಗೆ ಅಭಿನಂದನೆ ಸಲ್ಲಿಸಿದ ಎಂ.ಲಕ್ಷ್ಮಣ್‌

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡಿರುವುದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಬೆಂಬಲ ಸೂಚಿಸಿರುವುದಕ್ಕೆ, ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಡಿಸೆಂಬರ್.26)‌ ಕಾಂಗ್ರೆಸ್‌ ಕಚೇರಿಯಲ್ಲಿ ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ(ಡಿ.25) ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡಬಹುದು ಎಂದು ಬೆಂಬಲ ಸೂಚಿಸಿರುವುದಕ್ಕೆ ನಾನು ಅಭಿನಂದಿಸುತ್ತೇನೆ. ಪ್ರತಾಪ್‌ ಸಿಂಹ ಬಲಪಂಥೀಯವಾಗಿದ್ದು, ಹತ್ತು ವರ್ಷಗಳ ನಂತರ ಸತ್ಯ ಹೇಳಿದ್ದಾರೆ. ಹೀಗಾಗಿ ಅವರು ಎಲ್ಲಾದರೂ ಸಿಕ್ಕಿದರೆ ನಾನು ಅವರಿಗೆ ಕಾಫಿ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರತಾಪ್‌ ಸಿಂಗಹ ಅವರಿಗೆ ಟಿಕೆಟ್‌ ತಪ್ಪಿದ ಮೇಲೆ ಜ್ಞಾನೋದಯವಾಗಿದೆ. ಈಗಲಾದರೂ ಬಿಜೆಪಿಯ ಹಿಡನ್‌ ಅಜೆಂಡಾ ಗೊತ್ತಾಗಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆಯೇ ಹೊರತು ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಕ್ಕೆ ಅಲ್ಲ. ಬಿಜೆಪಿಯವರು 5 ವರ್ಷ ಅಧಿಕಾರದಲ್ಲಿದ್ದರು ಮೈಸೂರಿಗೆ ಏನು ಕೋಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ ದೇಶಾದ್ಯಾಂತ ಚರ್ಚೆಯಾಗುತ್ತಿದೆ ಎಂದರೆ ಅದು ಈ ವ್ಯವಸ್ಥೆಯ ದುರ್ದೈವ. ಶಾಸಕ ಕೆ.ಹರೀಶ್‌ ಗೌಡ ಜಿಲ್ಲಾಧಿಕಾರಿ ಕಚೇರಿಗೆ 2.1 ಕಿಲೋ ಮೀಟರ್‌ ರಸ್ತೆ ನಾಮಕರಣಕ್ಕೆ ಪ್ರಸ್ತಾವನೆ ಸಲ್ಲಿಯಾಗುವಂತೆ ಪತ್ರ ಬರೆದಿದ್ದಾರೆ. ಅಲ್ಲದೇ ಕ್ಷೇತ್ರದ ಜನ ಸಾಮಾನ್ಯರಿಂದ ರಸ್ತೆ ನಾಮಕರಣ ವಿಚಾರವಾಗಿ ಮನವಿ ಹೋಗಿದೆ. ಜೊತೆಗೆ ಈ ರಸ್ತೆಯಲ್ಲಿ 10 ಆಸ್ಪತ್ರೆಗಳು ನಿರ್ಮಾಣವಾಗಿವೆ. ಅದಕ್ಕೆ ಸುಮಾರು 1,569 ಕೋಟಿ ರೂಪಾಯಿಗಳನ್ನು ಸಿಎಂ ಸಿದ್ದರಾಮಯ್ಯ ಅವರೇ ಬಿಡುಗಡೆ ಮಾಡಿದ್ದು, ಜಯದೇವ ಆಸ್ಪತ್ರೆ, ಸೂಪರ್‌ ಸ್ಪೆಷಾಲಿಟಿ ಜಿಲ್ಲಾ ಆಸ್ಪತ್ರೆ, ಹೈಟೆಕ್‌ ಪಂಚಕರ್ಮ ಆಸ್ಪತ್ರೆ, ಚರಕ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳು ಸ್ಥಾಪನೆಯಾಗಿವೆ. ಹೀಗಾಗಿ ಸಿದ್ದರಾಮಯ್ಯ ಹೆಸರು ಇತಿಹಾಸ ಪುಟ್ಟದಲ್ಲಿ ಇರಬೇಕೆಂದು ನಮ್ಮ ಮನವಿಯಾಗಿದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

5 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

11 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

12 hours ago