ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರಮನೆ ಆಡಳಿತ ಮಂಡಳಿ ವತಿಯಿಂದ ಡಿಸೆಂಬರ್.21ರಂದು ಮಾಗಿ ಉತ್ಸವವನ್ನು ಆಯೋಜನೆ ಮಾಡಲಾಗಿದೆ.
ಮೈಸೂರು ಅರಮನೆ ಆವರಣದಲ್ಲಿ ಮಾಗಿ ಉತ್ಸವ ನಡೆಯಲಿದ್ದು, ಇದಕ್ಕೆ ಡಿಸೆಂಬರ್.21ರಂದು ಚಾಲನೆ ಸಿಗಲಿದೆ.
ಮಾಗಿ ಉತ್ಸವದ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿ ಸಕಲ ಸಿದ್ಧತೆ ಕೈಗೊಂಡಿದ್ದು, ಈಗಾಗಲೇ ವಿವಿಧ ಬಗೆಯ ಹೂವಿನ ಕುಂಡಗಳನ್ನು ನಿರ್ಮಾಣ ಮಾಡಲಾಗಿದೆ.
ಇನ್ನು ಮಾಗಿ ಉತ್ಸವಕ್ಕೆ ಅರಮನೆ ಆವರಣದ ಪಾರ್ಕ್ನಲ್ಲಿ ವಿವಿಧ ಬಗೆತ ಕಲಾಕೃತಿಗಳನ್ನು ಸಹ ನಿರ್ಮಾಣ ಮಾಡಲಾಗಿದೆ.
ಕಲಾಕೃತಿಗಳಲ್ಲಿ ಪ್ರಮುಖವಾಗಿ ನಂಜನಗೂಡು ಶ್ರೀಕಂಠೇಶ್ವರ ದೇವಾಲಯ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ, ಮುಮ್ಮಡಿ ಕೃಷ್ಣರಾಜ ಒಡೆಯರ್ ಪ್ರತಿಮೆ, ಬಂಡೀಪುರ ಅರಣ್ಯ ಸೇರಿದಂತೆ ಹಲವು ಪ್ರಾಣಿ ಹಾಗೂ ಪಕ್ಷಿಗಳ ಕಲಾಕೃತಿ ನಿರ್ಮಾಣವಾಗಿದೆ.
ಮಾಗಿ ಉತ್ಸವಕ್ಕೆ ನೆರೆಯ ರಾಜ್ಯಗಳು ಹಾಗೂ ಇತರೆ ದೇಶಗಳಿಂದಲೂ ವಿವಿಧ ವಿವಿಧ ಬಗೆಯ ಹೂವುಗಳನ್ನು ಖರೀದಿ ಮಾಡಲಾಗಿದೆ.
ಮೈಸೂರಿನ ಉಮಾಶಂಕರ್ ನೇತೃತ್ವದಲ್ಲಿ ಕಲಾ ಕೃತಿಗಳು ನಿರ್ಮಾಣವಾಗುತ್ತಿದ್ದು, ಕಾರ್ಮಿಕರು ಕಲಾಕೃತಿಗಳಿಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್ಗಳನ್ನು ವಿತರಣೆ ಮಾಡಲಾಗುವುದು ಎಂದು…