ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಸಾಂಪ್ರದಾಯಿಕವಾಗಿ ಮಹಾಬಲೇಶ್ವರ ರಥೋತ್ಸವ ಜರುಗಿತು.
ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡಿಬೆಟ್ಟದಲ್ಲಿ ಮಹಾಬಲೇಶ್ವರ ರಥೋತ್ಸವ ಜರುಗಿದ್ದು, ಚಾಮುಂಡೇಶ್ವರಿ ದೇವಸ್ಥಾನವನ್ನು ಒಂದು ಸುತ್ತು ಪ್ರದಕ್ಷಿಣೆ ನಡೆಸಿ ಮಹಾಬಲೇಶ್ವರ ರಥೋತ್ಸವ ಸಂಪನ್ನಗೊಂಡಿತು.
ರಥೋತ್ಸವದಲ್ಲಿ ಭಾಗಿಯಾಗಿದ್ದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಕುಟುಂಬ ದೇವರಿಗೆ ವಿಶೇಷ ಅರ್ಚನೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥನೆ ಸಲ್ಲಿಸಿದರು.
ರಥೋತ್ಸವ ಆರಂಭಕ್ಕೂ ಮುನ್ನ ಪೊಲೀಸ್ ಬ್ಯಾಂಡ್ ವತಿಯಿಂದ ಮೈಸೂರು ಆಸ್ಥಾನ ಗೀತೆ ಕಾಯೌ ಶ್ರೀ ಗೌರಿ ಗೀತೆಯನ್ನು ನುಡಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ನೆರೆದಿದ್ದ ನೂರಾರು ಸಾರ್ವಜನಿಕರು ರಥೋತ್ಸವವನ್ನು ನೋಡಿ ಭಕ್ತಿ ಭಾವ ಮೆರೆದರು.
ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…
ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…
ದಾಸೇಗೌಡ ಓವರ್ಹೆಡ್ ಟ್ಯಾಂಕ್ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್ಆರ್ಟಿಸಿ ಬಸ್…
ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…
ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ…